Homeಫ್ಯಾಕ್ಟ್‌ಚೆಕ್FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

- Advertisement -
- Advertisement -

‘ಚಾಲೆಂಜ್ ವೋಟ್‌ ಮತ್ತು ಟೆಂಡರ್ಡ್‌ ವೋಟ್‌’ (Challenge vote and Tender vote) ಕುರಿತು ವಿವರಿಸಿದ ಚುನಾವಣಾ ಜಾಗೃತಿಯದ್ದು ಎನ್ನಲಾದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಸಂದೇಶದಲ್ಲಿ ಈ ಕೆಳಗಿನಂತೆ ಬರೆಯಲಾಗಿದೆ..

“ನೀವು ಮತಗಟ್ಟೆಗೆ ತೆರಳಿದಾಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಸೆಕ್ಷನ್ 49ಪಿ ಅಡಿಯಲ್ಲಿ ‘ಚಾಲೆಂಜ್ ವೋಟ್’ ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ.”

“ಯಾರಾದರೂ ಈಗಾಗಲೇ ನಿಮ್ಮ ಮತವನ್ನು ಚಲಾಯಿಸಿದ್ದಾರೆ ಎಂಬುವುದು ನಿಮಗೆ ಗೊತ್ತಾದರೆ, ನಂತರ “ಟೆಂಡರ್ಡ್‌ ವೋಟ್” ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ”.

“ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ಮತಗಳು ದಾಖಲಾದರೆ, ಅಂತಹ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುತ್ತದೆ”.

ಪೋಸ್ಟ್‌ ಲಿಂಕ್‌ ಇಲ್ಲಿದೆ

ಫ್ಯಾಕ್ಟ್‌ಚೆಕ್ : ‘ಚಾಲೆಂಜ್ ವೋಟ್ ಮತ್ತು ಟೆಂಡರ್ಡ್‌ ವೋಟ್’ ಬಗ್ಗೆ ವೈರಲ್ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ ನಾವು ಮೊದಲು ಚಾಲೆಂಜ್ ವೋಟ್‌ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ 9 ಮೇ 2019 ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯೊಂದು ನಮಗೆ ದೊರೆತಿದೆ. ಈ ಸುದ್ದಿಯಲ್ಲಿ “ಚಾಲೆಂಜ್ ವೋಟ್‌ ಎನ್ನುವುದು ಮತಗಟ್ಟೆಯಲ್ಲಿ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಮತಗಟ್ಟೆಯಲ್ಲಿ ಕುಳಿತ ಚುನಾವಣಾ ಏಜೆಂಟ್ ಯಾವುದೇ ಮತದಾರರ ಗುರುತಿನ ಕುರಿತು ಪ್ರಶ್ನಿಸುವುದಾಗಿದೆ. ಅಂದರೆ, ಮತದಾರರು ತನ್ನ ಗುರುತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎನ್ನುವುದಾಗಿ” ಎಂದಿದೆ.

ನಾವು ಇನ್ನಷ್ಟು ಹುಡುಕಿದಾದ ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ 2023ರ ಚುನಾವಣಾ ಆಯೋಗದ ಕೈಪಿಡಿ ದೊರೆತಿದೆ. ಅದರಲ್ಲಿ ಚಾಲೆಂಜ್ ವೋಟ್ ಎಂದರೆ “ಮತಗಟ್ಟೆಯಲ್ಲಿ ಕುಳಿತಿ ಚುನಾವಣಾ ಏಜೆಂಟ್ 2 ರೂಪಾಯಿ ನಗದು ಠೇವಣಿ ಮಾಡುವ ಮೂಲಕ ಯಾವುದೇ ಮತದಾರರ ಗುರುತಿನ ಕುರಿತು ಚಾಲೆಂಜ್ ಮಾಡಬಹುದು. ಈ ವೇಳೆ ಸಣ್ಣ ವಿಚಾರಣೆಯ ಮೂಲಕ ಚಾಲೆಂಜ್ ಅನ್ನು ನಿರ್ಧರಿಸಬೇಕು. ಒಂದು ವೇಳೆ ಮತದಾರರ ವಿರುದ್ದದ ಚಾಲೆಂಜ್‌ ಸಮರ್ಥಿನಿಯ ಅಲ್ಲ ಎಂದು ಕಂಡು ಬಂದರೆ, ಆ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಬೇಕು. ಮತದಾರರ ಗುರುತಿನ ಕುರಿತ ಚಾಲೆಂಜ್ ಸಮರ್ಥಿನಿವಾಗಿದ್ದೆ (ಮತದಾರರ ಗುರುತು ಸುಳ್ಳಾಗಿದ್ದರೆ) ಅವರಿಗೆ ಮತ ಚಲಾಯಿಸಲು ಅವಕಾಶ ನೀಡಬಾರದು ಮತ್ತು ಲಿಖಿತ ದೂರಿನ ಮೂಲಕ ಪೊಲೀಸರಿಗೆ ಹಸ್ತಾಂತರಿಸಬೇಕು” ಎಂದಿದೆ.


“ಒಬ್ಬರು ಮತದಾರರನ್ನು ನಕಲಿ ಎಂದು ಸೂಚಿಸಲು ಬಲವಾದ ಆಧಾರಗಳಿಲ್ಲದಿದ್ದರೆ, ಅವರನ್ನು ನಿಜವಾದ ಮತದಾರರೆಂದು ಪರಿಗಣಿಸಬೇಕು. ಅಂತಹ ಯಾವುದೇ ಪ್ರಕರಣವನ್ನು ಸಾರಾಂಶ ವಿಚಾರಣೆಯ (ಪ್ರಾಥಮಿಕ ವಿಚಾರಣೆ) ಮೂಲಕ ನಿರ್ಧರಿಸಬೇಕು” ಎಂದು ಕೈಪಿಡಿಯಲ್ಲಿ ಸೇರಿಸಲಾಗಿದೆ.

theprint.in ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸುದ್ದಿಯಲ್ಲಿ “1961ರ ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ಚಾಲೆಂಜ್ ವೋಟ್‌ ಬಗ್ಗೆ ಯಾವುದೇ ಉಲ್ಲೇಖ ನಮಗೆ ಕಂಡು ಬಂದಿಲ್ಲ” ಎಂದು ಹೇಳಿದೆ.

ವಿಭಾಗ 49ಪಿ ಎಂದರೇನು?

“1961ರ ಚುನಾವಣಾ ನಿಯಮಗಳ ನಡವಳಿಕೆಯ ವಿಭಾಗ 49 ಪಿಯಲ್ಲಿ ‘ಟೆಂಡರ್ಡ್‌ ವೋಟ್‌’ ಬಗ್ಗೆ ಹೇಳಲಾಗಿದೆ. ಈ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಮತದಾನ ಮಾಡಿ ಹೋದ ಬಳಿಕ, ಅದೇ ಗುರುತಿನಲ್ಲಿ ಮತ್ತೊಬ್ಬ ಮತ ಚಲಾಯಿಸಲು ಬಂದರೆ, ಆತನಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿ ಕೆಲವೊಂದು ಸಾಮಾನ್ಯ ಪ್ರಶ್ನೆಗಳನ್ನು ಕೇಳಬಹುದು. ಆತ ನೀಡಿದ ಉತ್ತರ ತೃಪ್ತಿಕರವಾದರೆ, ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಮತಿಸುವ ಬದಲು, ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು. ಬ್ಯಾಲೆಟ್ ಪೇಪರ್‌ ಚುನಾವಣಾ ಆಯೋಗ ನಿಗದಿಪಡಿಸಿದ ನಿರ್ದಿಷ್ಟ ಭಾಷೆಯಲ್ಲಿರಬೇಕು”

ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ?

ಯಾವುದೇ ಮತಗಟ್ಟೆಗಳಲ್ಲಿ ಶೇ.14ಕ್ಕಿಂತ ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವ theprint.in “ನಾವು 1961ರ ಚುನಾವಣಾ ನಿಯಮಗಳು ಮತ್ತು ಚುನಾವಣಾಧಿಕಾರಿಗಳ ಕೈಪಿಡಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಎಲ್ಲಿಯೂ ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣಾ ಆಯೋಗವೂ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಟೆಂಡರ್ಡ್‌ ಮತಗಳ ಕಾರಣದಿಂದಾಗಿ ಮರು ಮತದಾನದ ನಡೆಸಿದ ಕುರಿತು ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ನಮಗೆ ಕಂಡು ಬಂದಿಲ್ಲ ಎಂದು ತಿಳಿಸಿದೆ.

theprint.in ನ ಫ್ಯಾಕ್ಟ್‌ಚೆಕ್ ವರದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ಟೆಂಡರ್ಡ್‌ ಮತಗಳನ್ನು ಮುಖ್ಯ ಮತಗಳ ಎಣಿಕೆ ವೇಳೆ ಪರಿಗಣಿಸುವುದಿಲ್ಲ. ನ್ಯಾಯಾಂಗದ ಪ್ರಕಾರ, ಟೆಂಡರ್ಡ್‌ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ, ಅಂದರೆ, ಗೆಲುವಿನ ಅಂತರವು ಕಡಿಮೆ ಇದ್ದಾಗ ಮಾತ್ರ ಪರಿಗಣಿಸಲಾಗುತ್ತದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಿರುವ ಅಂಶವೇನೆಂದರೆ, ವೈರಲ್ ಪೋಸ್ಟ್‌ನಲ್ಲಿ ಚಾಲೆಂಜ್ ವೋಟ್‌ ಬಗ್ಗೆ ನೀಡಿರುವ ಮಾಹಿತಿ ತಪ್ಪು. ಇನ್ನು ಟೆಂಡರ್ಡ್‌ ವೋಟ್‌ ಹಾಕಬಹುದಾದರೂ, ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ವೋಟ್‌ ಚಲಾವಣೆಯಾದರೆ, ಅಲ್ಲಿ ಮರು ಮತದಾನ ಮಾಡುವ ಬಗ್ಗೆಯೂ ಉಲ್ಲೇಖವಿಲ್ಲ.

ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ನೀಡಿರುವ ಮಾಹಿತಿಯು ಬಹುತೇಕ ನಾವು ಸ್ವತಃ ಹುಡುಕಾಡಿದಾಗ ದೊರೆತ ಪತ್ರಿಕಾ ವರದಿಗಳು ಮತ್ತು ಚುನಾವಣಾ ಆಯೋಗದ ಪ್ರಕಟಣೆಗಳನ್ನು ಒಳಗೊಂಡಿದೆ. ಇನ್ನೂ ಕೆಲ ಮಾಹಿತಿಗಳನ್ನು theprint.in ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯನ್ನು ಆಧರಿಸಿವೆ. theprint.in ನ ಫ್ಯಾಕ್ಟ್‌ಚೆಕ್ ವರದಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸುಳ್ಳು ಸುದ್ದಿಯ ಬಗೆಗಿನ ಈ ಬರಹವನ್ನು ಓದಿ’ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, theprint.in ನ ವರದಿಯಲ್ಲಿ ಹೇಳಲಾದ ಅಂಶಗಳು ಸರಿಯಾಗಿದೆ ಎಂದು ನಾವು ನಂಬಿದ್ದೇವೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯ ಎಕ್ಸ್ ಪೋಸ್ಟ್ ಲಿಂಕ್ ಇಲ್ಲಿದೆ

ಇದನ್ನೂ ಓದಿ : FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...