Homeಫ್ಯಾಕ್ಟ್‌ಚೆಕ್FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

- Advertisement -
- Advertisement -

‘ಚಾಲೆಂಜ್ ವೋಟ್‌ ಮತ್ತು ಟೆಂಡರ್ಡ್‌ ವೋಟ್‌’ (Challenge vote and Tender vote) ಕುರಿತು ವಿವರಿಸಿದ ಚುನಾವಣಾ ಜಾಗೃತಿಯದ್ದು ಎನ್ನಲಾದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಸಂದೇಶದಲ್ಲಿ ಈ ಕೆಳಗಿನಂತೆ ಬರೆಯಲಾಗಿದೆ..

“ನೀವು ಮತಗಟ್ಟೆಗೆ ತೆರಳಿದಾಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಸೆಕ್ಷನ್ 49ಪಿ ಅಡಿಯಲ್ಲಿ ‘ಚಾಲೆಂಜ್ ವೋಟ್’ ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ.”

“ಯಾರಾದರೂ ಈಗಾಗಲೇ ನಿಮ್ಮ ಮತವನ್ನು ಚಲಾಯಿಸಿದ್ದಾರೆ ಎಂಬುವುದು ನಿಮಗೆ ಗೊತ್ತಾದರೆ, ನಂತರ “ಟೆಂಡರ್ಡ್‌ ವೋಟ್” ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ”.

“ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ಮತಗಳು ದಾಖಲಾದರೆ, ಅಂತಹ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುತ್ತದೆ”.

ಪೋಸ್ಟ್‌ ಲಿಂಕ್‌ ಇಲ್ಲಿದೆ

ಫ್ಯಾಕ್ಟ್‌ಚೆಕ್ : ‘ಚಾಲೆಂಜ್ ವೋಟ್ ಮತ್ತು ಟೆಂಡರ್ಡ್‌ ವೋಟ್’ ಬಗ್ಗೆ ವೈರಲ್ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ ನಾವು ಮೊದಲು ಚಾಲೆಂಜ್ ವೋಟ್‌ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ 9 ಮೇ 2019 ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯೊಂದು ನಮಗೆ ದೊರೆತಿದೆ. ಈ ಸುದ್ದಿಯಲ್ಲಿ “ಚಾಲೆಂಜ್ ವೋಟ್‌ ಎನ್ನುವುದು ಮತಗಟ್ಟೆಯಲ್ಲಿ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಮತಗಟ್ಟೆಯಲ್ಲಿ ಕುಳಿತ ಚುನಾವಣಾ ಏಜೆಂಟ್ ಯಾವುದೇ ಮತದಾರರ ಗುರುತಿನ ಕುರಿತು ಪ್ರಶ್ನಿಸುವುದಾಗಿದೆ. ಅಂದರೆ, ಮತದಾರರು ತನ್ನ ಗುರುತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎನ್ನುವುದಾಗಿ” ಎಂದಿದೆ.

ನಾವು ಇನ್ನಷ್ಟು ಹುಡುಕಿದಾದ ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ 2023ರ ಚುನಾವಣಾ ಆಯೋಗದ ಕೈಪಿಡಿ ದೊರೆತಿದೆ. ಅದರಲ್ಲಿ ಚಾಲೆಂಜ್ ವೋಟ್ ಎಂದರೆ “ಮತಗಟ್ಟೆಯಲ್ಲಿ ಕುಳಿತಿ ಚುನಾವಣಾ ಏಜೆಂಟ್ 2 ರೂಪಾಯಿ ನಗದು ಠೇವಣಿ ಮಾಡುವ ಮೂಲಕ ಯಾವುದೇ ಮತದಾರರ ಗುರುತಿನ ಕುರಿತು ಚಾಲೆಂಜ್ ಮಾಡಬಹುದು. ಈ ವೇಳೆ ಸಣ್ಣ ವಿಚಾರಣೆಯ ಮೂಲಕ ಚಾಲೆಂಜ್ ಅನ್ನು ನಿರ್ಧರಿಸಬೇಕು. ಒಂದು ವೇಳೆ ಮತದಾರರ ವಿರುದ್ದದ ಚಾಲೆಂಜ್‌ ಸಮರ್ಥಿನಿಯ ಅಲ್ಲ ಎಂದು ಕಂಡು ಬಂದರೆ, ಆ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಬೇಕು. ಮತದಾರರ ಗುರುತಿನ ಕುರಿತ ಚಾಲೆಂಜ್ ಸಮರ್ಥಿನಿವಾಗಿದ್ದೆ (ಮತದಾರರ ಗುರುತು ಸುಳ್ಳಾಗಿದ್ದರೆ) ಅವರಿಗೆ ಮತ ಚಲಾಯಿಸಲು ಅವಕಾಶ ನೀಡಬಾರದು ಮತ್ತು ಲಿಖಿತ ದೂರಿನ ಮೂಲಕ ಪೊಲೀಸರಿಗೆ ಹಸ್ತಾಂತರಿಸಬೇಕು” ಎಂದಿದೆ.


“ಒಬ್ಬರು ಮತದಾರರನ್ನು ನಕಲಿ ಎಂದು ಸೂಚಿಸಲು ಬಲವಾದ ಆಧಾರಗಳಿಲ್ಲದಿದ್ದರೆ, ಅವರನ್ನು ನಿಜವಾದ ಮತದಾರರೆಂದು ಪರಿಗಣಿಸಬೇಕು. ಅಂತಹ ಯಾವುದೇ ಪ್ರಕರಣವನ್ನು ಸಾರಾಂಶ ವಿಚಾರಣೆಯ (ಪ್ರಾಥಮಿಕ ವಿಚಾರಣೆ) ಮೂಲಕ ನಿರ್ಧರಿಸಬೇಕು” ಎಂದು ಕೈಪಿಡಿಯಲ್ಲಿ ಸೇರಿಸಲಾಗಿದೆ.

theprint.in ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸುದ್ದಿಯಲ್ಲಿ “1961ರ ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ಚಾಲೆಂಜ್ ವೋಟ್‌ ಬಗ್ಗೆ ಯಾವುದೇ ಉಲ್ಲೇಖ ನಮಗೆ ಕಂಡು ಬಂದಿಲ್ಲ” ಎಂದು ಹೇಳಿದೆ.

ವಿಭಾಗ 49ಪಿ ಎಂದರೇನು?

“1961ರ ಚುನಾವಣಾ ನಿಯಮಗಳ ನಡವಳಿಕೆಯ ವಿಭಾಗ 49 ಪಿಯಲ್ಲಿ ‘ಟೆಂಡರ್ಡ್‌ ವೋಟ್‌’ ಬಗ್ಗೆ ಹೇಳಲಾಗಿದೆ. ಈ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಮತದಾನ ಮಾಡಿ ಹೋದ ಬಳಿಕ, ಅದೇ ಗುರುತಿನಲ್ಲಿ ಮತ್ತೊಬ್ಬ ಮತ ಚಲಾಯಿಸಲು ಬಂದರೆ, ಆತನಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿ ಕೆಲವೊಂದು ಸಾಮಾನ್ಯ ಪ್ರಶ್ನೆಗಳನ್ನು ಕೇಳಬಹುದು. ಆತ ನೀಡಿದ ಉತ್ತರ ತೃಪ್ತಿಕರವಾದರೆ, ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಮತಿಸುವ ಬದಲು, ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು. ಬ್ಯಾಲೆಟ್ ಪೇಪರ್‌ ಚುನಾವಣಾ ಆಯೋಗ ನಿಗದಿಪಡಿಸಿದ ನಿರ್ದಿಷ್ಟ ಭಾಷೆಯಲ್ಲಿರಬೇಕು”

ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ?

ಯಾವುದೇ ಮತಗಟ್ಟೆಗಳಲ್ಲಿ ಶೇ.14ಕ್ಕಿಂತ ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವ theprint.in “ನಾವು 1961ರ ಚುನಾವಣಾ ನಿಯಮಗಳು ಮತ್ತು ಚುನಾವಣಾಧಿಕಾರಿಗಳ ಕೈಪಿಡಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಎಲ್ಲಿಯೂ ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣಾ ಆಯೋಗವೂ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಟೆಂಡರ್ಡ್‌ ಮತಗಳ ಕಾರಣದಿಂದಾಗಿ ಮರು ಮತದಾನದ ನಡೆಸಿದ ಕುರಿತು ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ನಮಗೆ ಕಂಡು ಬಂದಿಲ್ಲ ಎಂದು ತಿಳಿಸಿದೆ.

theprint.in ನ ಫ್ಯಾಕ್ಟ್‌ಚೆಕ್ ವರದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ಟೆಂಡರ್ಡ್‌ ಮತಗಳನ್ನು ಮುಖ್ಯ ಮತಗಳ ಎಣಿಕೆ ವೇಳೆ ಪರಿಗಣಿಸುವುದಿಲ್ಲ. ನ್ಯಾಯಾಂಗದ ಪ್ರಕಾರ, ಟೆಂಡರ್ಡ್‌ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ, ಅಂದರೆ, ಗೆಲುವಿನ ಅಂತರವು ಕಡಿಮೆ ಇದ್ದಾಗ ಮಾತ್ರ ಪರಿಗಣಿಸಲಾಗುತ್ತದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಿರುವ ಅಂಶವೇನೆಂದರೆ, ವೈರಲ್ ಪೋಸ್ಟ್‌ನಲ್ಲಿ ಚಾಲೆಂಜ್ ವೋಟ್‌ ಬಗ್ಗೆ ನೀಡಿರುವ ಮಾಹಿತಿ ತಪ್ಪು. ಇನ್ನು ಟೆಂಡರ್ಡ್‌ ವೋಟ್‌ ಹಾಕಬಹುದಾದರೂ, ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ವೋಟ್‌ ಚಲಾವಣೆಯಾದರೆ, ಅಲ್ಲಿ ಮರು ಮತದಾನ ಮಾಡುವ ಬಗ್ಗೆಯೂ ಉಲ್ಲೇಖವಿಲ್ಲ.

ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ನೀಡಿರುವ ಮಾಹಿತಿಯು ಬಹುತೇಕ ನಾವು ಸ್ವತಃ ಹುಡುಕಾಡಿದಾಗ ದೊರೆತ ಪತ್ರಿಕಾ ವರದಿಗಳು ಮತ್ತು ಚುನಾವಣಾ ಆಯೋಗದ ಪ್ರಕಟಣೆಗಳನ್ನು ಒಳಗೊಂಡಿದೆ. ಇನ್ನೂ ಕೆಲ ಮಾಹಿತಿಗಳನ್ನು theprint.in ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯನ್ನು ಆಧರಿಸಿವೆ. theprint.in ನ ಫ್ಯಾಕ್ಟ್‌ಚೆಕ್ ವರದಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸುಳ್ಳು ಸುದ್ದಿಯ ಬಗೆಗಿನ ಈ ಬರಹವನ್ನು ಓದಿ’ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, theprint.in ನ ವರದಿಯಲ್ಲಿ ಹೇಳಲಾದ ಅಂಶಗಳು ಸರಿಯಾಗಿದೆ ಎಂದು ನಾವು ನಂಬಿದ್ದೇವೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯ ಎಕ್ಸ್ ಪೋಸ್ಟ್ ಲಿಂಕ್ ಇಲ್ಲಿದೆ

ಇದನ್ನೂ ಓದಿ : FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...