Homeಫ್ಯಾಕ್ಟ್‌ಚೆಕ್FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

- Advertisement -
- Advertisement -

‘ಚಾಲೆಂಜ್ ವೋಟ್‌ ಮತ್ತು ಟೆಂಡರ್ಡ್‌ ವೋಟ್‌’ (Challenge vote and Tender vote) ಕುರಿತು ವಿವರಿಸಿದ ಚುನಾವಣಾ ಜಾಗೃತಿಯದ್ದು ಎನ್ನಲಾದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಸಂದೇಶದಲ್ಲಿ ಈ ಕೆಳಗಿನಂತೆ ಬರೆಯಲಾಗಿದೆ..

“ನೀವು ಮತಗಟ್ಟೆಗೆ ತೆರಳಿದಾಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಸೆಕ್ಷನ್ 49ಪಿ ಅಡಿಯಲ್ಲಿ ‘ಚಾಲೆಂಜ್ ವೋಟ್’ ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ.”

“ಯಾರಾದರೂ ಈಗಾಗಲೇ ನಿಮ್ಮ ಮತವನ್ನು ಚಲಾಯಿಸಿದ್ದಾರೆ ಎಂಬುವುದು ನಿಮಗೆ ಗೊತ್ತಾದರೆ, ನಂತರ “ಟೆಂಡರ್ಡ್‌ ವೋಟ್” ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ”.

“ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ಮತಗಳು ದಾಖಲಾದರೆ, ಅಂತಹ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುತ್ತದೆ”.

ಪೋಸ್ಟ್‌ ಲಿಂಕ್‌ ಇಲ್ಲಿದೆ

ಫ್ಯಾಕ್ಟ್‌ಚೆಕ್ : ‘ಚಾಲೆಂಜ್ ವೋಟ್ ಮತ್ತು ಟೆಂಡರ್ಡ್‌ ವೋಟ್’ ಬಗ್ಗೆ ವೈರಲ್ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ ನಾವು ಮೊದಲು ಚಾಲೆಂಜ್ ವೋಟ್‌ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ 9 ಮೇ 2019 ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯೊಂದು ನಮಗೆ ದೊರೆತಿದೆ. ಈ ಸುದ್ದಿಯಲ್ಲಿ “ಚಾಲೆಂಜ್ ವೋಟ್‌ ಎನ್ನುವುದು ಮತಗಟ್ಟೆಯಲ್ಲಿ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಮತಗಟ್ಟೆಯಲ್ಲಿ ಕುಳಿತ ಚುನಾವಣಾ ಏಜೆಂಟ್ ಯಾವುದೇ ಮತದಾರರ ಗುರುತಿನ ಕುರಿತು ಪ್ರಶ್ನಿಸುವುದಾಗಿದೆ. ಅಂದರೆ, ಮತದಾರರು ತನ್ನ ಗುರುತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎನ್ನುವುದಾಗಿ” ಎಂದಿದೆ.

ನಾವು ಇನ್ನಷ್ಟು ಹುಡುಕಿದಾದ ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ 2023ರ ಚುನಾವಣಾ ಆಯೋಗದ ಕೈಪಿಡಿ ದೊರೆತಿದೆ. ಅದರಲ್ಲಿ ಚಾಲೆಂಜ್ ವೋಟ್ ಎಂದರೆ “ಮತಗಟ್ಟೆಯಲ್ಲಿ ಕುಳಿತಿ ಚುನಾವಣಾ ಏಜೆಂಟ್ 2 ರೂಪಾಯಿ ನಗದು ಠೇವಣಿ ಮಾಡುವ ಮೂಲಕ ಯಾವುದೇ ಮತದಾರರ ಗುರುತಿನ ಕುರಿತು ಚಾಲೆಂಜ್ ಮಾಡಬಹುದು. ಈ ವೇಳೆ ಸಣ್ಣ ವಿಚಾರಣೆಯ ಮೂಲಕ ಚಾಲೆಂಜ್ ಅನ್ನು ನಿರ್ಧರಿಸಬೇಕು. ಒಂದು ವೇಳೆ ಮತದಾರರ ವಿರುದ್ದದ ಚಾಲೆಂಜ್‌ ಸಮರ್ಥಿನಿಯ ಅಲ್ಲ ಎಂದು ಕಂಡು ಬಂದರೆ, ಆ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಬೇಕು. ಮತದಾರರ ಗುರುತಿನ ಕುರಿತ ಚಾಲೆಂಜ್ ಸಮರ್ಥಿನಿವಾಗಿದ್ದೆ (ಮತದಾರರ ಗುರುತು ಸುಳ್ಳಾಗಿದ್ದರೆ) ಅವರಿಗೆ ಮತ ಚಲಾಯಿಸಲು ಅವಕಾಶ ನೀಡಬಾರದು ಮತ್ತು ಲಿಖಿತ ದೂರಿನ ಮೂಲಕ ಪೊಲೀಸರಿಗೆ ಹಸ್ತಾಂತರಿಸಬೇಕು” ಎಂದಿದೆ.


“ಒಬ್ಬರು ಮತದಾರರನ್ನು ನಕಲಿ ಎಂದು ಸೂಚಿಸಲು ಬಲವಾದ ಆಧಾರಗಳಿಲ್ಲದಿದ್ದರೆ, ಅವರನ್ನು ನಿಜವಾದ ಮತದಾರರೆಂದು ಪರಿಗಣಿಸಬೇಕು. ಅಂತಹ ಯಾವುದೇ ಪ್ರಕರಣವನ್ನು ಸಾರಾಂಶ ವಿಚಾರಣೆಯ (ಪ್ರಾಥಮಿಕ ವಿಚಾರಣೆ) ಮೂಲಕ ನಿರ್ಧರಿಸಬೇಕು” ಎಂದು ಕೈಪಿಡಿಯಲ್ಲಿ ಸೇರಿಸಲಾಗಿದೆ.

theprint.in ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸುದ್ದಿಯಲ್ಲಿ “1961ರ ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ಚಾಲೆಂಜ್ ವೋಟ್‌ ಬಗ್ಗೆ ಯಾವುದೇ ಉಲ್ಲೇಖ ನಮಗೆ ಕಂಡು ಬಂದಿಲ್ಲ” ಎಂದು ಹೇಳಿದೆ.

ವಿಭಾಗ 49ಪಿ ಎಂದರೇನು?

“1961ರ ಚುನಾವಣಾ ನಿಯಮಗಳ ನಡವಳಿಕೆಯ ವಿಭಾಗ 49 ಪಿಯಲ್ಲಿ ‘ಟೆಂಡರ್ಡ್‌ ವೋಟ್‌’ ಬಗ್ಗೆ ಹೇಳಲಾಗಿದೆ. ಈ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಮತದಾನ ಮಾಡಿ ಹೋದ ಬಳಿಕ, ಅದೇ ಗುರುತಿನಲ್ಲಿ ಮತ್ತೊಬ್ಬ ಮತ ಚಲಾಯಿಸಲು ಬಂದರೆ, ಆತನಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿ ಕೆಲವೊಂದು ಸಾಮಾನ್ಯ ಪ್ರಶ್ನೆಗಳನ್ನು ಕೇಳಬಹುದು. ಆತ ನೀಡಿದ ಉತ್ತರ ತೃಪ್ತಿಕರವಾದರೆ, ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಮತಿಸುವ ಬದಲು, ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು. ಬ್ಯಾಲೆಟ್ ಪೇಪರ್‌ ಚುನಾವಣಾ ಆಯೋಗ ನಿಗದಿಪಡಿಸಿದ ನಿರ್ದಿಷ್ಟ ಭಾಷೆಯಲ್ಲಿರಬೇಕು”

ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ?

ಯಾವುದೇ ಮತಗಟ್ಟೆಗಳಲ್ಲಿ ಶೇ.14ಕ್ಕಿಂತ ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವ theprint.in “ನಾವು 1961ರ ಚುನಾವಣಾ ನಿಯಮಗಳು ಮತ್ತು ಚುನಾವಣಾಧಿಕಾರಿಗಳ ಕೈಪಿಡಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಎಲ್ಲಿಯೂ ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣಾ ಆಯೋಗವೂ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಟೆಂಡರ್ಡ್‌ ಮತಗಳ ಕಾರಣದಿಂದಾಗಿ ಮರು ಮತದಾನದ ನಡೆಸಿದ ಕುರಿತು ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ನಮಗೆ ಕಂಡು ಬಂದಿಲ್ಲ ಎಂದು ತಿಳಿಸಿದೆ.

theprint.in ನ ಫ್ಯಾಕ್ಟ್‌ಚೆಕ್ ವರದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ಟೆಂಡರ್ಡ್‌ ಮತಗಳನ್ನು ಮುಖ್ಯ ಮತಗಳ ಎಣಿಕೆ ವೇಳೆ ಪರಿಗಣಿಸುವುದಿಲ್ಲ. ನ್ಯಾಯಾಂಗದ ಪ್ರಕಾರ, ಟೆಂಡರ್ಡ್‌ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ, ಅಂದರೆ, ಗೆಲುವಿನ ಅಂತರವು ಕಡಿಮೆ ಇದ್ದಾಗ ಮಾತ್ರ ಪರಿಗಣಿಸಲಾಗುತ್ತದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಿರುವ ಅಂಶವೇನೆಂದರೆ, ವೈರಲ್ ಪೋಸ್ಟ್‌ನಲ್ಲಿ ಚಾಲೆಂಜ್ ವೋಟ್‌ ಬಗ್ಗೆ ನೀಡಿರುವ ಮಾಹಿತಿ ತಪ್ಪು. ಇನ್ನು ಟೆಂಡರ್ಡ್‌ ವೋಟ್‌ ಹಾಕಬಹುದಾದರೂ, ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ವೋಟ್‌ ಚಲಾವಣೆಯಾದರೆ, ಅಲ್ಲಿ ಮರು ಮತದಾನ ಮಾಡುವ ಬಗ್ಗೆಯೂ ಉಲ್ಲೇಖವಿಲ್ಲ.

ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ನೀಡಿರುವ ಮಾಹಿತಿಯು ಬಹುತೇಕ ನಾವು ಸ್ವತಃ ಹುಡುಕಾಡಿದಾಗ ದೊರೆತ ಪತ್ರಿಕಾ ವರದಿಗಳು ಮತ್ತು ಚುನಾವಣಾ ಆಯೋಗದ ಪ್ರಕಟಣೆಗಳನ್ನು ಒಳಗೊಂಡಿದೆ. ಇನ್ನೂ ಕೆಲ ಮಾಹಿತಿಗಳನ್ನು theprint.in ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯನ್ನು ಆಧರಿಸಿವೆ. theprint.in ನ ಫ್ಯಾಕ್ಟ್‌ಚೆಕ್ ವರದಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸುಳ್ಳು ಸುದ್ದಿಯ ಬಗೆಗಿನ ಈ ಬರಹವನ್ನು ಓದಿ’ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, theprint.in ನ ವರದಿಯಲ್ಲಿ ಹೇಳಲಾದ ಅಂಶಗಳು ಸರಿಯಾಗಿದೆ ಎಂದು ನಾವು ನಂಬಿದ್ದೇವೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯ ಎಕ್ಸ್ ಪೋಸ್ಟ್ ಲಿಂಕ್ ಇಲ್ಲಿದೆ

ಇದನ್ನೂ ಓದಿ : FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...