Homeಫ್ಯಾಕ್ಟ್‌ಚೆಕ್FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

- Advertisement -
- Advertisement -

‘ಚಾಲೆಂಜ್ ವೋಟ್‌ ಮತ್ತು ಟೆಂಡರ್ಡ್‌ ವೋಟ್‌’ (Challenge vote and Tender vote) ಕುರಿತು ವಿವರಿಸಿದ ಚುನಾವಣಾ ಜಾಗೃತಿಯದ್ದು ಎನ್ನಲಾದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಸಂದೇಶದಲ್ಲಿ ಈ ಕೆಳಗಿನಂತೆ ಬರೆಯಲಾಗಿದೆ..

“ನೀವು ಮತಗಟ್ಟೆಗೆ ತೆರಳಿದಾಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಸೆಕ್ಷನ್ 49ಪಿ ಅಡಿಯಲ್ಲಿ ‘ಚಾಲೆಂಜ್ ವೋಟ್’ ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ.”

“ಯಾರಾದರೂ ಈಗಾಗಲೇ ನಿಮ್ಮ ಮತವನ್ನು ಚಲಾಯಿಸಿದ್ದಾರೆ ಎಂಬುವುದು ನಿಮಗೆ ಗೊತ್ತಾದರೆ, ನಂತರ “ಟೆಂಡರ್ಡ್‌ ವೋಟ್” ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ”.

“ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ಮತಗಳು ದಾಖಲಾದರೆ, ಅಂತಹ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುತ್ತದೆ”.

ಪೋಸ್ಟ್‌ ಲಿಂಕ್‌ ಇಲ್ಲಿದೆ

ಫ್ಯಾಕ್ಟ್‌ಚೆಕ್ : ‘ಚಾಲೆಂಜ್ ವೋಟ್ ಮತ್ತು ಟೆಂಡರ್ಡ್‌ ವೋಟ್’ ಬಗ್ಗೆ ವೈರಲ್ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ ನಾವು ಮೊದಲು ಚಾಲೆಂಜ್ ವೋಟ್‌ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ 9 ಮೇ 2019 ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯೊಂದು ನಮಗೆ ದೊರೆತಿದೆ. ಈ ಸುದ್ದಿಯಲ್ಲಿ “ಚಾಲೆಂಜ್ ವೋಟ್‌ ಎನ್ನುವುದು ಮತಗಟ್ಟೆಯಲ್ಲಿ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಮತಗಟ್ಟೆಯಲ್ಲಿ ಕುಳಿತ ಚುನಾವಣಾ ಏಜೆಂಟ್ ಯಾವುದೇ ಮತದಾರರ ಗುರುತಿನ ಕುರಿತು ಪ್ರಶ್ನಿಸುವುದಾಗಿದೆ. ಅಂದರೆ, ಮತದಾರರು ತನ್ನ ಗುರುತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎನ್ನುವುದಾಗಿ” ಎಂದಿದೆ.

ನಾವು ಇನ್ನಷ್ಟು ಹುಡುಕಿದಾದ ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ 2023ರ ಚುನಾವಣಾ ಆಯೋಗದ ಕೈಪಿಡಿ ದೊರೆತಿದೆ. ಅದರಲ್ಲಿ ಚಾಲೆಂಜ್ ವೋಟ್ ಎಂದರೆ “ಮತಗಟ್ಟೆಯಲ್ಲಿ ಕುಳಿತಿ ಚುನಾವಣಾ ಏಜೆಂಟ್ 2 ರೂಪಾಯಿ ನಗದು ಠೇವಣಿ ಮಾಡುವ ಮೂಲಕ ಯಾವುದೇ ಮತದಾರರ ಗುರುತಿನ ಕುರಿತು ಚಾಲೆಂಜ್ ಮಾಡಬಹುದು. ಈ ವೇಳೆ ಸಣ್ಣ ವಿಚಾರಣೆಯ ಮೂಲಕ ಚಾಲೆಂಜ್ ಅನ್ನು ನಿರ್ಧರಿಸಬೇಕು. ಒಂದು ವೇಳೆ ಮತದಾರರ ವಿರುದ್ದದ ಚಾಲೆಂಜ್‌ ಸಮರ್ಥಿನಿಯ ಅಲ್ಲ ಎಂದು ಕಂಡು ಬಂದರೆ, ಆ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಬೇಕು. ಮತದಾರರ ಗುರುತಿನ ಕುರಿತ ಚಾಲೆಂಜ್ ಸಮರ್ಥಿನಿವಾಗಿದ್ದೆ (ಮತದಾರರ ಗುರುತು ಸುಳ್ಳಾಗಿದ್ದರೆ) ಅವರಿಗೆ ಮತ ಚಲಾಯಿಸಲು ಅವಕಾಶ ನೀಡಬಾರದು ಮತ್ತು ಲಿಖಿತ ದೂರಿನ ಮೂಲಕ ಪೊಲೀಸರಿಗೆ ಹಸ್ತಾಂತರಿಸಬೇಕು” ಎಂದಿದೆ.


“ಒಬ್ಬರು ಮತದಾರರನ್ನು ನಕಲಿ ಎಂದು ಸೂಚಿಸಲು ಬಲವಾದ ಆಧಾರಗಳಿಲ್ಲದಿದ್ದರೆ, ಅವರನ್ನು ನಿಜವಾದ ಮತದಾರರೆಂದು ಪರಿಗಣಿಸಬೇಕು. ಅಂತಹ ಯಾವುದೇ ಪ್ರಕರಣವನ್ನು ಸಾರಾಂಶ ವಿಚಾರಣೆಯ (ಪ್ರಾಥಮಿಕ ವಿಚಾರಣೆ) ಮೂಲಕ ನಿರ್ಧರಿಸಬೇಕು” ಎಂದು ಕೈಪಿಡಿಯಲ್ಲಿ ಸೇರಿಸಲಾಗಿದೆ.

theprint.in ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸುದ್ದಿಯಲ್ಲಿ “1961ರ ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ಚಾಲೆಂಜ್ ವೋಟ್‌ ಬಗ್ಗೆ ಯಾವುದೇ ಉಲ್ಲೇಖ ನಮಗೆ ಕಂಡು ಬಂದಿಲ್ಲ” ಎಂದು ಹೇಳಿದೆ.

ವಿಭಾಗ 49ಪಿ ಎಂದರೇನು?

“1961ರ ಚುನಾವಣಾ ನಿಯಮಗಳ ನಡವಳಿಕೆಯ ವಿಭಾಗ 49 ಪಿಯಲ್ಲಿ ‘ಟೆಂಡರ್ಡ್‌ ವೋಟ್‌’ ಬಗ್ಗೆ ಹೇಳಲಾಗಿದೆ. ಈ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಮತದಾನ ಮಾಡಿ ಹೋದ ಬಳಿಕ, ಅದೇ ಗುರುತಿನಲ್ಲಿ ಮತ್ತೊಬ್ಬ ಮತ ಚಲಾಯಿಸಲು ಬಂದರೆ, ಆತನಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿ ಕೆಲವೊಂದು ಸಾಮಾನ್ಯ ಪ್ರಶ್ನೆಗಳನ್ನು ಕೇಳಬಹುದು. ಆತ ನೀಡಿದ ಉತ್ತರ ತೃಪ್ತಿಕರವಾದರೆ, ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಮತಿಸುವ ಬದಲು, ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು. ಬ್ಯಾಲೆಟ್ ಪೇಪರ್‌ ಚುನಾವಣಾ ಆಯೋಗ ನಿಗದಿಪಡಿಸಿದ ನಿರ್ದಿಷ್ಟ ಭಾಷೆಯಲ್ಲಿರಬೇಕು”

ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ?

ಯಾವುದೇ ಮತಗಟ್ಟೆಗಳಲ್ಲಿ ಶೇ.14ಕ್ಕಿಂತ ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವ theprint.in “ನಾವು 1961ರ ಚುನಾವಣಾ ನಿಯಮಗಳು ಮತ್ತು ಚುನಾವಣಾಧಿಕಾರಿಗಳ ಕೈಪಿಡಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಎಲ್ಲಿಯೂ ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣಾ ಆಯೋಗವೂ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಟೆಂಡರ್ಡ್‌ ಮತಗಳ ಕಾರಣದಿಂದಾಗಿ ಮರು ಮತದಾನದ ನಡೆಸಿದ ಕುರಿತು ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ನಮಗೆ ಕಂಡು ಬಂದಿಲ್ಲ ಎಂದು ತಿಳಿಸಿದೆ.

theprint.in ನ ಫ್ಯಾಕ್ಟ್‌ಚೆಕ್ ವರದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ಟೆಂಡರ್ಡ್‌ ಮತಗಳನ್ನು ಮುಖ್ಯ ಮತಗಳ ಎಣಿಕೆ ವೇಳೆ ಪರಿಗಣಿಸುವುದಿಲ್ಲ. ನ್ಯಾಯಾಂಗದ ಪ್ರಕಾರ, ಟೆಂಡರ್ಡ್‌ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ, ಅಂದರೆ, ಗೆಲುವಿನ ಅಂತರವು ಕಡಿಮೆ ಇದ್ದಾಗ ಮಾತ್ರ ಪರಿಗಣಿಸಲಾಗುತ್ತದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಿರುವ ಅಂಶವೇನೆಂದರೆ, ವೈರಲ್ ಪೋಸ್ಟ್‌ನಲ್ಲಿ ಚಾಲೆಂಜ್ ವೋಟ್‌ ಬಗ್ಗೆ ನೀಡಿರುವ ಮಾಹಿತಿ ತಪ್ಪು. ಇನ್ನು ಟೆಂಡರ್ಡ್‌ ವೋಟ್‌ ಹಾಕಬಹುದಾದರೂ, ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ವೋಟ್‌ ಚಲಾವಣೆಯಾದರೆ, ಅಲ್ಲಿ ಮರು ಮತದಾನ ಮಾಡುವ ಬಗ್ಗೆಯೂ ಉಲ್ಲೇಖವಿಲ್ಲ.

ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ನೀಡಿರುವ ಮಾಹಿತಿಯು ಬಹುತೇಕ ನಾವು ಸ್ವತಃ ಹುಡುಕಾಡಿದಾಗ ದೊರೆತ ಪತ್ರಿಕಾ ವರದಿಗಳು ಮತ್ತು ಚುನಾವಣಾ ಆಯೋಗದ ಪ್ರಕಟಣೆಗಳನ್ನು ಒಳಗೊಂಡಿದೆ. ಇನ್ನೂ ಕೆಲ ಮಾಹಿತಿಗಳನ್ನು theprint.in ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯನ್ನು ಆಧರಿಸಿವೆ. theprint.in ನ ಫ್ಯಾಕ್ಟ್‌ಚೆಕ್ ವರದಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸುಳ್ಳು ಸುದ್ದಿಯ ಬಗೆಗಿನ ಈ ಬರಹವನ್ನು ಓದಿ’ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, theprint.in ನ ವರದಿಯಲ್ಲಿ ಹೇಳಲಾದ ಅಂಶಗಳು ಸರಿಯಾಗಿದೆ ಎಂದು ನಾವು ನಂಬಿದ್ದೇವೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯ ಎಕ್ಸ್ ಪೋಸ್ಟ್ ಲಿಂಕ್ ಇಲ್ಲಿದೆ

ಇದನ್ನೂ ಓದಿ : FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...