Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...