Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...