Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...