Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...