Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....