Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...