Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...