Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...