Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...