Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್...

FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

- Advertisement -
- Advertisement -

ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸುವ ಕಾರ್ಟೂನ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಕಾರ್ಟೂನ್‌ನಲ್ಲಿ “ಭಾರತ ಎಂಬ ಎಲೆಯನ್ನು ತಿನ್ನುವ ಕಾಂಗ್ರೆಸ್ ಹಸು, ಭಾರತೀಯರಿಗೆ ಸೆಗಣಿ ಕೊಟ್ಟರೆ, ಗಾಂಧಿ ಕುಟುಂಬಕ್ಕೆ ಹಾಲು ಕೊಡುತ್ತಿದೆ” ಎಂದು ಹೇಳಲಾಗಿದೆ.

ಕಾರ್ಟೂನ್‌ ಜೊತೆಗೆ “ಅಮೆರಿಕನ್ ಕಾರ್ಟೂನಿಸ್ಟ್ ಬೆನ್ ಗ್ಯಾರಿಸನ್ ಅವರ ಭಾರತ ದೇಶದ ಚಿತ್ರಣ. ಕಾಂಗ್ರೆಸ್ ಭಾರತವನ್ನು ಹೇಗೆ ಆಳಿತು ಎಂಬುವುದನ್ನು ತೋರಿಸಲು ಇದು ಉತ್ತಮ ಮಾರ್ಗವಾಗಿದೆ” ಎಂದು ಬರೆದುಕೊಳ್ಳಲಾಗಿದೆ.

ಈ ಕಾರ್ಟೂನ್‌ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಸ್‌. ಗುರುಮೂರ್ತಿ ಎಂಬ ಬಳಕೆದಾರ “ನೆಹರೂ ಮತ್ತು ರಾಹುಲ್ ಆಳ್ವಿಕೆಯನ್ನು ಉತ್ತಮವಾಗಿ ಚಿತ್ರಿಸಲಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಕಾರ್ಟೂನ್‌ ಕುರಿತು ನಾವು ಮಾಹಿತಿ ಹುಡುಕಿದಾಗ, ಅದು ತಿರುಚಿದ ಕಾರ್ಟೂನ್‌. ಮೂಲ ಕಾರ್ಟೂನ್‌ನಲ್ಲಿ ವಿದೇಶಿ ಹೂಡಿಕೆದಾರರು ಭಾರತವನ್ನು ಲೂಟಿ ಮಾಡುತಿದ್ದಾರೆ ಎಂಬುವುದನ್ನು ಚಿತ್ರಿಸಿರುವುದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಕಾರ್ಟೂನ್‌ ಕುರಿತು ಹುಡುಕಾಡಿದಾಗ, ಫೆಬ್ರವರಿ 2021ರಲ್ಲಿ ಎಕ್ಸ್‌ ಬಳಕೆದಾರ ಅರುಣ್ ದೇಶಪಾಂಡೆ ಎಂಬವರು ಮೇಲಿನಂತೆ ಆರೋಪಿಸಿ ಅದೇ ಕಾರ್ಟೂನ್‌ ಹಂಚಿಕೊಂಡಿರುವುದು ಗೊತ್ತಾಗಿದೆ.

ಆದರೆ, ದೇಶಪಾಂಡೆಯವರ ಪೋಸ್ಟ್‌ಗೆ ಕಮೆಂಟ್ ಮಾಡಿರುವ ರಾಕೇಶ್ ಕೃಷ್ಣನ್ ಸಿಂಹ ಎಂಬ ಎಕ್ಸ್ ಬಳಕೆದಾರ 2015ರಲ್ಲಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕಾರ್ಟೂನ್‌ನ ಸ್ಕ್ರೀನ್‌ ಶಾಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

ಅವರು ಹೇಳಿದಂತೆ, ಮೂಲ ಕಾರ್ಟೂನ್‌ ಗಾಂಧಿ ಕುಟುಂಬವನ್ನು ಗುರಿಯಾಗಿಸುವ ಬದಲು ಮೋದಿಯವರ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ. ಅಲ್ಲದೆ, ಆ ಕಾರ್ಟೂನ್‌ ರಚಿಸಿದವರು ಬೆನ್ ಗ್ಯಾರಿಸನ್ ಅಲ್ಲ. 2015ರಲ್ಲಿ ಅಮಲ್ ಮೇಧಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಆ ಕಾರ್ಟೂನ್‌ ರಚಿಸಿದ್ದಾರೆ.

ಎರಡು ಕಾರ್ಟೂನ್‌ಗಳ ಹೋಲಿಕೆ ಕೆಳಗಿದೆ

ಎಕ್ಸ್‌ ಬಳಕೆದಾರ ರಾಕೇಶ್ ಕೃಷ್ಣನ್ ಸಿಂಹ ಅವರು ಹೇಳಿದಂತೆ, ಎರಡನೆಯದಾಗಿ ಹಂಚಿಕೊಂಡ ಕಾರ್ಟೂನಲ್ಲಿ ಅಮಲ್ ಮೇಧಿ ಅವರ ಸಹಿ ಕಾಣಬಹುದು. ಅಲ್ಲದೆ ಎರಡನೇ ಕಾರ್ಟೂನ್‌ ‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಗುರಿಯಾಗಿಸಿ ರಚಿಸಲಾಗಿದೆ.

ಇನ್ನು ಅಮಲ್ ಮೇಧಿ ವೈರಲ್ ಕಾರ್ಟೂನ್‌ ರಚಿಸಿದ್ದು ನಿಜವೇ? ಎಂದು ಪರಿಶೀಲಿಸಿದಾಗ, ಅವರ ಫೇಸ್‌ಬುಕ್‌ ಖಾತೆಯಲ್ಲಿ ಮಾರ್ಚ್ 28,2024 ರಂದು ಕಾರ್ಟೂನ್‌ ಕುರಿತು ಸ್ಪಷ್ಟನೆ ನೀಡಿರುವುದು ಕಾಣಿಸಿದೆ.
ಫೇಸ್‌ಬುಕ್‌ನಲ್ಲಿ ತಿರುಚಿದ ಮತ್ತು ಮೂಲ ಕಾರ್ಟೂನ್‌ಗಳನ್ನು ಹಂಚಿಕೊಂಡಿರುವ ಅಮಲ್ ಮೇಧಿ, “ಕಳೆದ 9 ವರ್ಷಗಳಿಂದ ಈ ಎರಡು ಕಾರ್ಟೂನ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾನು ಈ ಕಾರ್ಟೂನ್‌ನಿಂದ ಯಾವುದೇ ಹಣ ಗಳಿಸಿಲ್ಲ ಎಂದು ತಿಳಿಸಿದ್ದಾರೆ.

ನಾವು ಬೆನ್ ಗ್ಯಾರಿಸನ್ ಅವರ ಎಕ್ಸ್ ಖಾತೆಯನ್ನೂ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 23, 2017ರಂದು ” ನಾನು ಭಾರತದ ರಾಜಕೀಯದ ಕುರಿತು ಯಾವುದೇ ಕಾರ್ಟೂನ್‌ ರಚಿಸಿಲ್ಲ. ನನ್ನ ಸಹಿಯಲ್ಲಿ ಕೆಲವು ಹರಿದಾಡುತ್ತಿವೆ. ಅವು ನನ್ನದಲ್ಲ ಎಂದು ಬರೆದುಕೊಂಡಿರುವುದು ಕಾಣಿಸಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ “ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡಿದೆ ಎಂದು ಬಿಂಬಿಸಿದ ಕಾರ್ಟೂನ್‌ ಹಳೆಯ ತಿರುಚಿದ ಕಾರ್ಟೂನ್‌ ಆಗಿದೆ. ಮೋದಿ ಸರ್ಕಾರದ ಮೇಕ್‌ ಇಂಡಿಯಾ ಯೋಜನೆಯನ್ನು ಗುರಿಯಾಗಿಸಿ ಅಮಲ್ ಮೇಧಿ ಮೂಲ ಕಾರ್ಟೂನ್‌ ರಿಚಿಸಿದ್ದರು. ಅದನ್ನು ತಿರುಚಿ ಬೆನ್ ಗ್ಯಾರಿಸನ್ ಹೆಸರಿನಲ್ಲಿ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...