Homeಫ್ಯಾಕ್ಟ್‌ಚೆಕ್Fact Check: ಸ್ವತಃ ಅಂಬೇಡ್ಕರ್ ಮಾತನಾಡಿರುವುದು ಎಂದು ಸಿನಿಮಾ ವಿಡಿಯೋ ಹಂಚಿಕೆ

Fact Check: ಸ್ವತಃ ಅಂಬೇಡ್ಕರ್ ಮಾತನಾಡಿರುವುದು ಎಂದು ಸಿನಿಮಾ ವಿಡಿಯೋ ಹಂಚಿಕೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾಷಣ ಮಾಡಿದ್ದು ಎನ್ನಲಾದ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘Rastriya Dalitha Sangha’ ಎಂಬ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಅಂಬೇಡ್ಕರ್ ಹೆಸರು ಹೇಳಿ ಜಾತ್ಯಾತೀತತೆ ಪಾಠ ಹೇಳುವ ಲದ್ದಿ ಜೀವಿಗಳೇ ಇಲ್ಲಿ ಕೇಳಿ, ಜೈ ಶ್ರೀ ರಾಮ್, ಜೈ ಭೀಮ್, ಜೈ ಹಿಂದು ರಾಷ್ಟ್ರ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ವಿಡಿಯೋದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರಂತೆ ಹೋಲುವ ವ್ಯಕ್ತಿಯೊಬ್ಬರು “ಜಗತ್ತಿನ ಯಾವುದೇ ಶಕ್ತಿಗೂ ಭಾರತೀಯರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ. ಮುಸ್ಲಿಂ ಲೀಗ್ ಭಾರತವನ್ನು ಇಬ್ಬಾಗ ಮಾಡಿತು ತನ್ನ ಹಿತಾಸಕ್ತಿಗಾಗಿ. ಒಂದಲ್ಲಾ ಒಂದು ದಿನ ಎಲ್ಲರಿಗೂ ಅರಿವಾಗುವುದು ಭಾರತೀಯರದ್ದು ಸ್ವಹಿತಾಸಕ್ತಿಯಲ್ಲ ಭಾರತವನ್ನು ಅಖಂಡವಾಗಿಸುವುದು” ಎಂದು ಭಾಷಣ ಮಾಡಿರುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಅಂಬೇಡ್ಕರ್ ಹೆಸರಿನಲ್ಲಿ ಹರಿದಾಡುತ್ತಿರುವ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಇದು ‘2000ರಲ್ಲಿ ಬಿಡುಗಡೆಯಾದ ಜಬ್ಬಾರ್ ಪಟೇಲ್ ನಿರ್ದೇಶಿಸಿದ ‘ಡಾ. ಬಾಬಾ ಸಾಹೆಬ್ ಅಂಬೇಡ್ಕರ್’ ಎಂಬ ಇಂಗ್ಲಿಷ್-ಹಿಂದಿ ದ್ವಿಭಾಷಾ ಚಲನಚಿತ್ರದ ದೃಶ್ಯ’ ಎಂದು ತಿಳಿದು ಬಂದಿದೆ.

ವಿಕಿಪೀಡಿಯಲ್ಲಿ ದೊರೆತ ಮಾಹಿತಿ ಪ್ರಕಾರ, ಅಂಬೇಡ್ಕರ್ ಚಿತ್ರದಲ್ಲಿ ಮಳಯಾಳಂ ಚಿತ್ರರಂಗದ ಪ್ರಸಿದ್ಧ ನಟ ಮಮ್ಮುಟ್ಟಿ ಅಂಬೇಡ್ಕರ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ 1999 ರಲ್ಲಿ ಇಂಗ್ಲಿಷ್‌ನಲ್ಲಿ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ (ಮಮ್ಮುಟ್ಟಿ) ಮತ್ತು ಅತ್ಯುತ್ತಮ ಕಲಾ ನಿರ್ದೇಶನ (ನಿತಿನ್ ಚಂದ್ರಕಾಂತ್ ದೇಸಾಯಿ) ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ದೊರೆತಿವೆ.

ಚಿತ್ರದ ಕುರಿತ ಮಾಹಿತಿಗಾಗಿ ವಿಕಿಪೀಡಿಯ ಲಿಂಕ್ ಇಲ್ಲಿದೆ.

‘Buddhist Youth of India’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಸಂಪೂರ್ಣ ಸಿನಿಮಾ ಲಭ್ಯವಿದೆ. ಮೂರು ಗಂಟೆಗಳ ಅವಧಿಯ ಸಿನಿಮಾದಲ್ಲಿ 2 ಗಂಟೆ 30 ನಿಮಿಷ 18 ಸೆಕೆಂಡ್‌ನಿಂದ 2 ಗಂಟೆ 31 ನಿಮಿಷ 27 ಸೆಕೆಂಡ್‌ ನಡುವೆ ವೈರಲ್ ವಿಡಿಯೋದಲ್ಲಿರುವ ದೃಶ್ಯವಿದೆ. ಮುಸ್ಲಿಂ ಲೀಗ್ ಸಂವಿಧಾನ ರಚನಾ ಸಭೆಯನ್ನು ಧಿಕ್ಕರಿಸಿದಾಗ ಮತ್ತು ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಬೇಡಿಕೆ ಇಟ್ಟಾಗ ನಡೆದ ಚರ್ಚೆಯ ಸಂದರ್ಭದ ದೃಶ್ಯ ಇದಾಗಿದೆ. ಆದರೆ, ಈ ಭಾಷಣದಲ್ಲಿ ಅಂಬೇಡ್ಕರ್ ಅಖಂಡ ಭಾರತವನ್ನು ರಚಿಸುವುದು ಭಾರತೀಯರ ಗುರಿ ಎಂದಿದ್ದಾರೆಯೇ ಹೊರತು, ಯಾವುದೇ ಧರ್ಮದ ಆಧಾರದ ಮೇಲೆ ಅಖಂಡ ಭಾರತ ನಿರ್ಮಿಸುತ್ತೇವೆ ಎಂದಿಲ್ಲ.

ಸಿನಿಮಾದ ಯೂಟ್ಯೂಬ್ ಲಿಂಕ್ ಇಲ್ಲಿದೆ

ನಾವು ಮೇಲ್ಗಡೆ ಉಲ್ಲೇಖಿಸಿದ ಮೂಲಗಳ ಪ್ರಕಾರ ಇದೊಂದು ಸಿನಿಮಾ ದೃಶ್ಯ ಎಂಬುವುದು ಖಚಿತವಾಗಿದೆ. ಅಲ್ಲದೆ, ಇಲ್ಲಿ ಅಂಬೇಡ್ಕರ್ ಅವರ ಪಾತ್ರದಲ್ಲಿ ಆಡಿರುವ ಮಾತು ಭಾರತದ ಯಾವುದೇ ಧರ್ಮದ ವಿರುದ್ದ ದ್ವೇಷ ಕಾರುವ ಉದ್ದೇಶ ಹೊಂದಿರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...