Homeಫ್ಯಾಕ್ಟ್‌ಚೆಕ್Fact Check: ಸ್ವತಃ ಅಂಬೇಡ್ಕರ್ ಮಾತನಾಡಿರುವುದು ಎಂದು ಸಿನಿಮಾ ವಿಡಿಯೋ ಹಂಚಿಕೆ

Fact Check: ಸ್ವತಃ ಅಂಬೇಡ್ಕರ್ ಮಾತನಾಡಿರುವುದು ಎಂದು ಸಿನಿಮಾ ವಿಡಿಯೋ ಹಂಚಿಕೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾಷಣ ಮಾಡಿದ್ದು ಎನ್ನಲಾದ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘Rastriya Dalitha Sangha’ ಎಂಬ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಅಂಬೇಡ್ಕರ್ ಹೆಸರು ಹೇಳಿ ಜಾತ್ಯಾತೀತತೆ ಪಾಠ ಹೇಳುವ ಲದ್ದಿ ಜೀವಿಗಳೇ ಇಲ್ಲಿ ಕೇಳಿ, ಜೈ ಶ್ರೀ ರಾಮ್, ಜೈ ಭೀಮ್, ಜೈ ಹಿಂದು ರಾಷ್ಟ್ರ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ವಿಡಿಯೋದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರಂತೆ ಹೋಲುವ ವ್ಯಕ್ತಿಯೊಬ್ಬರು “ಜಗತ್ತಿನ ಯಾವುದೇ ಶಕ್ತಿಗೂ ಭಾರತೀಯರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ. ಮುಸ್ಲಿಂ ಲೀಗ್ ಭಾರತವನ್ನು ಇಬ್ಬಾಗ ಮಾಡಿತು ತನ್ನ ಹಿತಾಸಕ್ತಿಗಾಗಿ. ಒಂದಲ್ಲಾ ಒಂದು ದಿನ ಎಲ್ಲರಿಗೂ ಅರಿವಾಗುವುದು ಭಾರತೀಯರದ್ದು ಸ್ವಹಿತಾಸಕ್ತಿಯಲ್ಲ ಭಾರತವನ್ನು ಅಖಂಡವಾಗಿಸುವುದು” ಎಂದು ಭಾಷಣ ಮಾಡಿರುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಅಂಬೇಡ್ಕರ್ ಹೆಸರಿನಲ್ಲಿ ಹರಿದಾಡುತ್ತಿರುವ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಇದು ‘2000ರಲ್ಲಿ ಬಿಡುಗಡೆಯಾದ ಜಬ್ಬಾರ್ ಪಟೇಲ್ ನಿರ್ದೇಶಿಸಿದ ‘ಡಾ. ಬಾಬಾ ಸಾಹೆಬ್ ಅಂಬೇಡ್ಕರ್’ ಎಂಬ ಇಂಗ್ಲಿಷ್-ಹಿಂದಿ ದ್ವಿಭಾಷಾ ಚಲನಚಿತ್ರದ ದೃಶ್ಯ’ ಎಂದು ತಿಳಿದು ಬಂದಿದೆ.

ವಿಕಿಪೀಡಿಯಲ್ಲಿ ದೊರೆತ ಮಾಹಿತಿ ಪ್ರಕಾರ, ಅಂಬೇಡ್ಕರ್ ಚಿತ್ರದಲ್ಲಿ ಮಳಯಾಳಂ ಚಿತ್ರರಂಗದ ಪ್ರಸಿದ್ಧ ನಟ ಮಮ್ಮುಟ್ಟಿ ಅಂಬೇಡ್ಕರ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ 1999 ರಲ್ಲಿ ಇಂಗ್ಲಿಷ್‌ನಲ್ಲಿ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ (ಮಮ್ಮುಟ್ಟಿ) ಮತ್ತು ಅತ್ಯುತ್ತಮ ಕಲಾ ನಿರ್ದೇಶನ (ನಿತಿನ್ ಚಂದ್ರಕಾಂತ್ ದೇಸಾಯಿ) ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ದೊರೆತಿವೆ.

ಚಿತ್ರದ ಕುರಿತ ಮಾಹಿತಿಗಾಗಿ ವಿಕಿಪೀಡಿಯ ಲಿಂಕ್ ಇಲ್ಲಿದೆ.

‘Buddhist Youth of India’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಸಂಪೂರ್ಣ ಸಿನಿಮಾ ಲಭ್ಯವಿದೆ. ಮೂರು ಗಂಟೆಗಳ ಅವಧಿಯ ಸಿನಿಮಾದಲ್ಲಿ 2 ಗಂಟೆ 30 ನಿಮಿಷ 18 ಸೆಕೆಂಡ್‌ನಿಂದ 2 ಗಂಟೆ 31 ನಿಮಿಷ 27 ಸೆಕೆಂಡ್‌ ನಡುವೆ ವೈರಲ್ ವಿಡಿಯೋದಲ್ಲಿರುವ ದೃಶ್ಯವಿದೆ. ಮುಸ್ಲಿಂ ಲೀಗ್ ಸಂವಿಧಾನ ರಚನಾ ಸಭೆಯನ್ನು ಧಿಕ್ಕರಿಸಿದಾಗ ಮತ್ತು ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಬೇಡಿಕೆ ಇಟ್ಟಾಗ ನಡೆದ ಚರ್ಚೆಯ ಸಂದರ್ಭದ ದೃಶ್ಯ ಇದಾಗಿದೆ. ಆದರೆ, ಈ ಭಾಷಣದಲ್ಲಿ ಅಂಬೇಡ್ಕರ್ ಅಖಂಡ ಭಾರತವನ್ನು ರಚಿಸುವುದು ಭಾರತೀಯರ ಗುರಿ ಎಂದಿದ್ದಾರೆಯೇ ಹೊರತು, ಯಾವುದೇ ಧರ್ಮದ ಆಧಾರದ ಮೇಲೆ ಅಖಂಡ ಭಾರತ ನಿರ್ಮಿಸುತ್ತೇವೆ ಎಂದಿಲ್ಲ.

ಸಿನಿಮಾದ ಯೂಟ್ಯೂಬ್ ಲಿಂಕ್ ಇಲ್ಲಿದೆ

ನಾವು ಮೇಲ್ಗಡೆ ಉಲ್ಲೇಖಿಸಿದ ಮೂಲಗಳ ಪ್ರಕಾರ ಇದೊಂದು ಸಿನಿಮಾ ದೃಶ್ಯ ಎಂಬುವುದು ಖಚಿತವಾಗಿದೆ. ಅಲ್ಲದೆ, ಇಲ್ಲಿ ಅಂಬೇಡ್ಕರ್ ಅವರ ಪಾತ್ರದಲ್ಲಿ ಆಡಿರುವ ಮಾತು ಭಾರತದ ಯಾವುದೇ ಧರ್ಮದ ವಿರುದ್ದ ದ್ವೇಷ ಕಾರುವ ಉದ್ದೇಶ ಹೊಂದಿರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...