Homeಫ್ಯಾಕ್ಟ್‌ಚೆಕ್FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು...

FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ತನ್ನ ಪತ್ನಿ ಮಗನೊಂದಿಗೆ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬ ಸಂದೇಶವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘दिल्ली के दिल में ( @deepakprotocol) ಎಂಬ ಎಕ್ಸ್ ಬಳಕೆದಾರ ಜುಲೈ 4, 2024ರಂದು ಫೋಟೋವೊಂದನ್ನು ಹಂಚಿಕೊಂಡಿದ್ದು, “ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ಕಾಶಿಯಲ್ಲಿ ಪತ್ನಿ ಮತ್ತು ಮಗನೊಂದಿಗೆ ಮುಸ್ಲಿಂ ಧರ್ಮವನ್ನು ತೊರೆದು ಸನಾತನಿಯಾದರು” ಎಂದು ಬರೆದುಕೊಂಡಿದ್ದಾರೆ.

Sunil sahu(@BJP4SunilSahu) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಜುಲೈ 2, 2024ರಂದು ಮಾಜಿ ಕ್ರಿಕೆಟಿಗ ಅಝುರುದ್ದೀನ್ ಅವರ ಫೋಟೋ ಹಂಚಿಕೊಂಡು ” ಶ್ರೇಷ್ಠ ಕ್ರಿಕೆಟಿಗ ಅಝರುದ್ದೀನ್ ಅವರನ್ನು ಈಗ ಡಬ್ಲ್ಯೂ ಸಿಂಗ್ ಎಂದು ಕರೆಯಲಾಗುತ್ತದೆ. ಅವರ ಮಗನನ್ನು ರಾಜ್ ಸಿಂಗ್ ಮತ್ತು ಪತ್ನಿಯನ್ನು ಗುಡಿಯಾ ಸಿಂಗ್ ಎಂದು ಕರೆಯಲಾಗುತ್ತದೆ. ಮಾಜಿ ನಾಯಕ ಹಾಗೂ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ಧರ್ಮವನ್ನು ತೊರೆದು ಸನಾತನ ಧರ್ಮವನ್ನು ಸ್ವೀಕರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ವಾಟ್ಸಾಪ್‌ನಲ್ಲಿಯೂ ಅಝರುದ್ದೀನ್ ಫೋಟೋದೊಂದಿಗೆ ಇದೇ ರೀತಿಯ ಸಂದೇಶ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಚಂದೌಲಿ ನಿವಾಸಿ ಮೊಹಮ್ಮದ್ ಅಝರುದ್ದೀನ್ ಎಂಬವರು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದು, ಅದನ್ನು ತಪ್ಪಾಗಿ ಕ್ರಿಕೆಟಿಗ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂದು ಹಂಚಿಕೊಂಡಿರುವುದು ಗೊತ್ತಾಗಿದೆ.

ಈ ಕುರಿತು ಜುಲೈ 2, 2024ರಂದು ಅಮರ್ ಉಜಾಲಾ ಸುದ್ದಿ ಸಂಸ್ಥೆ ವಿಡಿಯೋ ಸಹಿತ ಸುದ್ದಿ ಪ್ರಕಟಿಸಿದೆ. ಸುದ್ದಿಯಲ್ಲಿ “ಚಂದೌಲಿಯ ಸದರ್ ಕೊತ್ವಾಲಿ ಪ್ರದೇಶದ ಬಿಚಿಯಾ ಗ್ರಾಮದ ನಿವಾಸಿ ಮೊಹಮ್ಮದ್ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದು, ಅವರ ಹೆಸರನ್ನು ಡಬ್ಲ್ಯೂ ಸಿಂಗ್ ಎಂದು ಬದಲಾಯಿಸಿದ್ದಾರೆ. ಅಝರುದ್ದೀನ್ ಜೊತೆ ಅವರ ಪತ್ನಿ ಮತ್ತು ಪುತ್ರ ಕೂಡ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಅವರು ರಾಮಚರಿತ ಮಾನಸ ಮತ್ತು ಗೀತೆ ಪೂಜೆ ಪುನಸ್ಕಾರವನ್ನು ಕೂಡ ಪ್ರಾರಂಭಿಸಿದ್ದಾರೆ ಎಂದು ತಿಳಿಸಲಾಗಿದೆ.

ಅಮರ್ ಉಜಾಲದ ಸುದ್ದಿಯಲ್ಲಿರುವ ವಿಡಿಯೋ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಒಂದೇ ಎಂಬುವುದನ್ನು ನಾವಿಲ್ಲಿ ಗಮನಿಸಬಹುದು.

ಒಟ್ಟಿನಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝುರುದ್ದೀನ್ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಆಗಿರುವುದು ಉತ್ತರ ಪ್ರದೇಶದ ಚಂದೌಲಿಯ ಜಿಲ್ಲೆಯ ನಿವಾಸಿ ಅಝರುದ್ದೀನ್ ಎಂಬವರದ್ದಾಗಿದೆ. ಮಾಜಿ ಕ್ರಿಕೆಟಿಗ ಅಝರುದ್ದೀನ್ ಹೈದರಾಬಾದ್‌ನಲ್ಲಿ ನೆಲೆಸಿದ್ದು, ಕಾಂಗ್ರೆಸ್ ನಾಯಕರೂ ಆಗಿದ್ದಾರೆ.

ಇದನ್ನೂ ಓದಿ : FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...