Homeಫ್ಯಾಕ್ಟ್‌ಚೆಕ್FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು...

FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ತನ್ನ ಪತ್ನಿ ಮಗನೊಂದಿಗೆ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬ ಸಂದೇಶವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘दिल्ली के दिल में ( @deepakprotocol) ಎಂಬ ಎಕ್ಸ್ ಬಳಕೆದಾರ ಜುಲೈ 4, 2024ರಂದು ಫೋಟೋವೊಂದನ್ನು ಹಂಚಿಕೊಂಡಿದ್ದು, “ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ಕಾಶಿಯಲ್ಲಿ ಪತ್ನಿ ಮತ್ತು ಮಗನೊಂದಿಗೆ ಮುಸ್ಲಿಂ ಧರ್ಮವನ್ನು ತೊರೆದು ಸನಾತನಿಯಾದರು” ಎಂದು ಬರೆದುಕೊಂಡಿದ್ದಾರೆ.

Sunil sahu(@BJP4SunilSahu) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಜುಲೈ 2, 2024ರಂದು ಮಾಜಿ ಕ್ರಿಕೆಟಿಗ ಅಝುರುದ್ದೀನ್ ಅವರ ಫೋಟೋ ಹಂಚಿಕೊಂಡು ” ಶ್ರೇಷ್ಠ ಕ್ರಿಕೆಟಿಗ ಅಝರುದ್ದೀನ್ ಅವರನ್ನು ಈಗ ಡಬ್ಲ್ಯೂ ಸಿಂಗ್ ಎಂದು ಕರೆಯಲಾಗುತ್ತದೆ. ಅವರ ಮಗನನ್ನು ರಾಜ್ ಸಿಂಗ್ ಮತ್ತು ಪತ್ನಿಯನ್ನು ಗುಡಿಯಾ ಸಿಂಗ್ ಎಂದು ಕರೆಯಲಾಗುತ್ತದೆ. ಮಾಜಿ ನಾಯಕ ಹಾಗೂ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ಧರ್ಮವನ್ನು ತೊರೆದು ಸನಾತನ ಧರ್ಮವನ್ನು ಸ್ವೀಕರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ವಾಟ್ಸಾಪ್‌ನಲ್ಲಿಯೂ ಅಝರುದ್ದೀನ್ ಫೋಟೋದೊಂದಿಗೆ ಇದೇ ರೀತಿಯ ಸಂದೇಶ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಚಂದೌಲಿ ನಿವಾಸಿ ಮೊಹಮ್ಮದ್ ಅಝರುದ್ದೀನ್ ಎಂಬವರು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದು, ಅದನ್ನು ತಪ್ಪಾಗಿ ಕ್ರಿಕೆಟಿಗ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂದು ಹಂಚಿಕೊಂಡಿರುವುದು ಗೊತ್ತಾಗಿದೆ.

ಈ ಕುರಿತು ಜುಲೈ 2, 2024ರಂದು ಅಮರ್ ಉಜಾಲಾ ಸುದ್ದಿ ಸಂಸ್ಥೆ ವಿಡಿಯೋ ಸಹಿತ ಸುದ್ದಿ ಪ್ರಕಟಿಸಿದೆ. ಸುದ್ದಿಯಲ್ಲಿ “ಚಂದೌಲಿಯ ಸದರ್ ಕೊತ್ವಾಲಿ ಪ್ರದೇಶದ ಬಿಚಿಯಾ ಗ್ರಾಮದ ನಿವಾಸಿ ಮೊಹಮ್ಮದ್ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದು, ಅವರ ಹೆಸರನ್ನು ಡಬ್ಲ್ಯೂ ಸಿಂಗ್ ಎಂದು ಬದಲಾಯಿಸಿದ್ದಾರೆ. ಅಝರುದ್ದೀನ್ ಜೊತೆ ಅವರ ಪತ್ನಿ ಮತ್ತು ಪುತ್ರ ಕೂಡ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಅವರು ರಾಮಚರಿತ ಮಾನಸ ಮತ್ತು ಗೀತೆ ಪೂಜೆ ಪುನಸ್ಕಾರವನ್ನು ಕೂಡ ಪ್ರಾರಂಭಿಸಿದ್ದಾರೆ ಎಂದು ತಿಳಿಸಲಾಗಿದೆ.

ಅಮರ್ ಉಜಾಲದ ಸುದ್ದಿಯಲ್ಲಿರುವ ವಿಡಿಯೋ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಒಂದೇ ಎಂಬುವುದನ್ನು ನಾವಿಲ್ಲಿ ಗಮನಿಸಬಹುದು.

ಒಟ್ಟಿನಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝುರುದ್ದೀನ್ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಆಗಿರುವುದು ಉತ್ತರ ಪ್ರದೇಶದ ಚಂದೌಲಿಯ ಜಿಲ್ಲೆಯ ನಿವಾಸಿ ಅಝರುದ್ದೀನ್ ಎಂಬವರದ್ದಾಗಿದೆ. ಮಾಜಿ ಕ್ರಿಕೆಟಿಗ ಅಝರುದ್ದೀನ್ ಹೈದರಾಬಾದ್‌ನಲ್ಲಿ ನೆಲೆಸಿದ್ದು, ಕಾಂಗ್ರೆಸ್ ನಾಯಕರೂ ಆಗಿದ್ದಾರೆ.

ಇದನ್ನೂ ಓದಿ : FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...