Homeಫ್ಯಾಕ್ಟ್‌ಚೆಕ್FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ...

FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

- Advertisement -
- Advertisement -

ಈ ವರ್ಷಾಂತ್ಯದಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಜಾರ್ಖಂಡ್‌ನ ಸಹ-ಪ್ರಭಾರಿಯಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇಮಿಸಿದೆ. ಈ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶರ್ಮಾ ಅವರು ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ್ದರು.

ಈ ವೇಳೆ ರಾಂಚಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಅಸ್ಸಾಂನಿಂದ ಬಂದಿದ್ದೇನೆ, ಜನಸಂಖ್ಯೆಯ ಬದಲಾವಣೆಯು ನನಗೆ ದೊಡ್ಡ ಸಮಸ್ಯೆಯಾಗಿದೆ. 1951ರಲ್ಲಿ, ಅಸ್ಸಾಂನ ಮುಸ್ಲಿಂ ಜನಸಂಖ್ಯೆಯು ಶೇಕಡ 14 ರಷ್ಟಿತ್ತು, ಇಂದು ಮುಸ್ಲಿಂ ಜನಸಂಖ್ಯೆಯು ಶೇಕಡ 40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ ಈ ವಿಷಯ ರಾಜಕೀಯವಲ್ಲ, ನನಗೆ ಇದು ಜೀವನ್ಮರಣ ಸಮಸ್ಯೆಯಾಗಿದೆ.”ಎಂದಿದ್ದರು.

ತನ್ನ ಹೇಳಿಕೆಯ ವಿಡಿಯೋವನ್ನು ಜುಲೈ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಶರ್ಮಾ ಅವರು “1951 ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಕೇವಲ 14 ಪ್ರತಿಶತದಷ್ಟಿತ್ತು, ಇಂದು ಮುಸ್ಲಿಮರ ಜನಸಂಖ್ಯೆಯು ಶೇಕಡಾ 40ಕ್ಕೆ ಏರಿದೆ ಬರೆದುಕೊಂಡಿದ್ದರು.

ಈ ವಿಷಯದ ಸತ್ಯಾಸತ್ಯತೆ ಪರಿಶೀಲಿಸದೆ ಸಿಎಂ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಹಲವು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಇವುಗಳಲ್ಲಿ ಹಿಂದೂಸ್ತಾನ್ ಟೈಮ್ಸ್, ರಿಪಬ್ಲಿಕ್ ಭಾರತ್, ಟೈಮ್ಸ್ ಆಫ್ ಇಂಡಿಯಾ, ದೈನಿಕ್ ಜಾಗರಣ್, ದಿ ಎಕನಾಮಿಕ್ಸ್ ಟೈಮ್ಸ್, ಝೀ ನ್ಯೂಸ್ ಇತ್ಯಾದಿ ಸೇರಿವೆ.

ಫ್ಯಾಕ್ಟ್‌ಚೆಕ್ : ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು 1961ರ ಧಾರ್ಮಿಕ ಜನಗಣತಿ ವರದಿಯನ್ನು ಭಾರತ ಸರ್ಕಾರದ ವೆಬ್‌ಸೈಟ್ ‘ಸೆನ್ಸಸ್ ಇಂಡಿಯಾ’ದಲ್ಲಿ ಪರಿಶೀಲಿಸಿದ್ದೇವೆ. ವೆಬ್‌ಸೈಟ್‌ನಲ್ಲಿ 1961ರಲ್ಲಿ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಯಾವ ಧರ್ಮದ ಜನ ಸಂಖ್ಯೆ ಎಷ್ಟಿತ್ತು ಮತ್ತು 1951-61ರ ನಡುವಿನ ವ್ಯತ್ಯಾಸದ ಮಾಹಿತಿಯಿದೆ.

ವೆಬ್‌ಸೈಟ್‌ನಲ್ಲಿರುವ ದಾಖಲೆಯ ಪುಟ ಸಂಖ್ಯೆ 4ರಲ್ಲಿ, 1951ರಲ್ಲಿ ಅಸ್ಸಾಂನ ಮುಸ್ಲಿಂ ಜನಸಂಖ್ಯೆ 19,95,936 ಎಂದು ತೋರಿಸಲಾಗಿದೆ. ಇದು ಒಟ್ಟು ಜನಸಂಖ್ಯೆಯ 22.60 ಪ್ರತಿಶತವಾಗಿತ್ತು. ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯು 1961 ರಲ್ಲಿ 27, 65,509 ಕ್ಕೆ ಏರಿತ್ತು. ಇದು ಒಟ್ಟು ಜನಸಂಖ್ಯೆಯ ಶೇ. 23.29 ರಷ್ಟಿತ್ತು. ಈ ದಾಖಲೆಯ ಪ್ರಕಾರ, 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 14ರಷ್ಟಿತ್ತು ಎಂಬ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆ ತಪ್ಪಾಗಿದೆ.

ಅಧಿಕೃತ ದಾಖಲೆಯ ಪ್ರಕಾರ, ಅಸ್ಸಾಂನಲ್ಲಿ 1951ರಲ್ಲಿ ಮುಸ್ಲಿಂ ಜನಸಂಖ್ಯೆ ಶೇ.22.60 ಇತ್ತು. 1961ರಲ್ಲಿ ಇದು ಶೇ. 23.29ಕ್ಕೆ ಏರಿಕೆಯಾಗಿತ್ತು. 2011ರ ಜನಗಣತಿ ಪ್ರಕಾರ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.34.22 ದಾಖಲಾಗಿತ್ತು. ಆ ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ, ಸರ್ಕಾರ ಗಣತಿ ನಡೆಸಿಲ್ಲ. ಆದರೂ, ಶೇ.40ರಷ್ಟು ಇರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...