Homeಫ್ಯಾಕ್ಟ್‌ಚೆಕ್FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ...

FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

- Advertisement -
- Advertisement -

ಈ ವರ್ಷಾಂತ್ಯದಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಜಾರ್ಖಂಡ್‌ನ ಸಹ-ಪ್ರಭಾರಿಯಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇಮಿಸಿದೆ. ಈ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶರ್ಮಾ ಅವರು ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ್ದರು.

ಈ ವೇಳೆ ರಾಂಚಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಅಸ್ಸಾಂನಿಂದ ಬಂದಿದ್ದೇನೆ, ಜನಸಂಖ್ಯೆಯ ಬದಲಾವಣೆಯು ನನಗೆ ದೊಡ್ಡ ಸಮಸ್ಯೆಯಾಗಿದೆ. 1951ರಲ್ಲಿ, ಅಸ್ಸಾಂನ ಮುಸ್ಲಿಂ ಜನಸಂಖ್ಯೆಯು ಶೇಕಡ 14 ರಷ್ಟಿತ್ತು, ಇಂದು ಮುಸ್ಲಿಂ ಜನಸಂಖ್ಯೆಯು ಶೇಕಡ 40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ ಈ ವಿಷಯ ರಾಜಕೀಯವಲ್ಲ, ನನಗೆ ಇದು ಜೀವನ್ಮರಣ ಸಮಸ್ಯೆಯಾಗಿದೆ.”ಎಂದಿದ್ದರು.

ತನ್ನ ಹೇಳಿಕೆಯ ವಿಡಿಯೋವನ್ನು ಜುಲೈ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಶರ್ಮಾ ಅವರು “1951 ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಕೇವಲ 14 ಪ್ರತಿಶತದಷ್ಟಿತ್ತು, ಇಂದು ಮುಸ್ಲಿಮರ ಜನಸಂಖ್ಯೆಯು ಶೇಕಡಾ 40ಕ್ಕೆ ಏರಿದೆ ಬರೆದುಕೊಂಡಿದ್ದರು.

ಈ ವಿಷಯದ ಸತ್ಯಾಸತ್ಯತೆ ಪರಿಶೀಲಿಸದೆ ಸಿಎಂ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಹಲವು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಇವುಗಳಲ್ಲಿ ಹಿಂದೂಸ್ತಾನ್ ಟೈಮ್ಸ್, ರಿಪಬ್ಲಿಕ್ ಭಾರತ್, ಟೈಮ್ಸ್ ಆಫ್ ಇಂಡಿಯಾ, ದೈನಿಕ್ ಜಾಗರಣ್, ದಿ ಎಕನಾಮಿಕ್ಸ್ ಟೈಮ್ಸ್, ಝೀ ನ್ಯೂಸ್ ಇತ್ಯಾದಿ ಸೇರಿವೆ.

ಫ್ಯಾಕ್ಟ್‌ಚೆಕ್ : ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು 1961ರ ಧಾರ್ಮಿಕ ಜನಗಣತಿ ವರದಿಯನ್ನು ಭಾರತ ಸರ್ಕಾರದ ವೆಬ್‌ಸೈಟ್ ‘ಸೆನ್ಸಸ್ ಇಂಡಿಯಾ’ದಲ್ಲಿ ಪರಿಶೀಲಿಸಿದ್ದೇವೆ. ವೆಬ್‌ಸೈಟ್‌ನಲ್ಲಿ 1961ರಲ್ಲಿ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಯಾವ ಧರ್ಮದ ಜನ ಸಂಖ್ಯೆ ಎಷ್ಟಿತ್ತು ಮತ್ತು 1951-61ರ ನಡುವಿನ ವ್ಯತ್ಯಾಸದ ಮಾಹಿತಿಯಿದೆ.

ವೆಬ್‌ಸೈಟ್‌ನಲ್ಲಿರುವ ದಾಖಲೆಯ ಪುಟ ಸಂಖ್ಯೆ 4ರಲ್ಲಿ, 1951ರಲ್ಲಿ ಅಸ್ಸಾಂನ ಮುಸ್ಲಿಂ ಜನಸಂಖ್ಯೆ 19,95,936 ಎಂದು ತೋರಿಸಲಾಗಿದೆ. ಇದು ಒಟ್ಟು ಜನಸಂಖ್ಯೆಯ 22.60 ಪ್ರತಿಶತವಾಗಿತ್ತು. ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯು 1961 ರಲ್ಲಿ 27, 65,509 ಕ್ಕೆ ಏರಿತ್ತು. ಇದು ಒಟ್ಟು ಜನಸಂಖ್ಯೆಯ ಶೇ. 23.29 ರಷ್ಟಿತ್ತು. ಈ ದಾಖಲೆಯ ಪ್ರಕಾರ, 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 14ರಷ್ಟಿತ್ತು ಎಂಬ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆ ತಪ್ಪಾಗಿದೆ.

ಅಧಿಕೃತ ದಾಖಲೆಯ ಪ್ರಕಾರ, ಅಸ್ಸಾಂನಲ್ಲಿ 1951ರಲ್ಲಿ ಮುಸ್ಲಿಂ ಜನಸಂಖ್ಯೆ ಶೇ.22.60 ಇತ್ತು. 1961ರಲ್ಲಿ ಇದು ಶೇ. 23.29ಕ್ಕೆ ಏರಿಕೆಯಾಗಿತ್ತು. 2011ರ ಜನಗಣತಿ ಪ್ರಕಾರ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.34.22 ದಾಖಲಾಗಿತ್ತು. ಆ ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ, ಸರ್ಕಾರ ಗಣತಿ ನಡೆಸಿಲ್ಲ. ಆದರೂ, ಶೇ.40ರಷ್ಟು ಇರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...