Homeಫ್ಯಾಕ್ಟ್‌ಚೆಕ್FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ...

FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

- Advertisement -
- Advertisement -

ಈ ವರ್ಷಾಂತ್ಯದಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಜಾರ್ಖಂಡ್‌ನ ಸಹ-ಪ್ರಭಾರಿಯಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇಮಿಸಿದೆ. ಈ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶರ್ಮಾ ಅವರು ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ್ದರು.

ಈ ವೇಳೆ ರಾಂಚಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಅಸ್ಸಾಂನಿಂದ ಬಂದಿದ್ದೇನೆ, ಜನಸಂಖ್ಯೆಯ ಬದಲಾವಣೆಯು ನನಗೆ ದೊಡ್ಡ ಸಮಸ್ಯೆಯಾಗಿದೆ. 1951ರಲ್ಲಿ, ಅಸ್ಸಾಂನ ಮುಸ್ಲಿಂ ಜನಸಂಖ್ಯೆಯು ಶೇಕಡ 14 ರಷ್ಟಿತ್ತು, ಇಂದು ಮುಸ್ಲಿಂ ಜನಸಂಖ್ಯೆಯು ಶೇಕಡ 40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ ಈ ವಿಷಯ ರಾಜಕೀಯವಲ್ಲ, ನನಗೆ ಇದು ಜೀವನ್ಮರಣ ಸಮಸ್ಯೆಯಾಗಿದೆ.”ಎಂದಿದ್ದರು.

ತನ್ನ ಹೇಳಿಕೆಯ ವಿಡಿಯೋವನ್ನು ಜುಲೈ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಶರ್ಮಾ ಅವರು “1951 ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಕೇವಲ 14 ಪ್ರತಿಶತದಷ್ಟಿತ್ತು, ಇಂದು ಮುಸ್ಲಿಮರ ಜನಸಂಖ್ಯೆಯು ಶೇಕಡಾ 40ಕ್ಕೆ ಏರಿದೆ ಬರೆದುಕೊಂಡಿದ್ದರು.

ಈ ವಿಷಯದ ಸತ್ಯಾಸತ್ಯತೆ ಪರಿಶೀಲಿಸದೆ ಸಿಎಂ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಹಲವು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಇವುಗಳಲ್ಲಿ ಹಿಂದೂಸ್ತಾನ್ ಟೈಮ್ಸ್, ರಿಪಬ್ಲಿಕ್ ಭಾರತ್, ಟೈಮ್ಸ್ ಆಫ್ ಇಂಡಿಯಾ, ದೈನಿಕ್ ಜಾಗರಣ್, ದಿ ಎಕನಾಮಿಕ್ಸ್ ಟೈಮ್ಸ್, ಝೀ ನ್ಯೂಸ್ ಇತ್ಯಾದಿ ಸೇರಿವೆ.

ಫ್ಯಾಕ್ಟ್‌ಚೆಕ್ : ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು 1961ರ ಧಾರ್ಮಿಕ ಜನಗಣತಿ ವರದಿಯನ್ನು ಭಾರತ ಸರ್ಕಾರದ ವೆಬ್‌ಸೈಟ್ ‘ಸೆನ್ಸಸ್ ಇಂಡಿಯಾ’ದಲ್ಲಿ ಪರಿಶೀಲಿಸಿದ್ದೇವೆ. ವೆಬ್‌ಸೈಟ್‌ನಲ್ಲಿ 1961ರಲ್ಲಿ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಯಾವ ಧರ್ಮದ ಜನ ಸಂಖ್ಯೆ ಎಷ್ಟಿತ್ತು ಮತ್ತು 1951-61ರ ನಡುವಿನ ವ್ಯತ್ಯಾಸದ ಮಾಹಿತಿಯಿದೆ.

ವೆಬ್‌ಸೈಟ್‌ನಲ್ಲಿರುವ ದಾಖಲೆಯ ಪುಟ ಸಂಖ್ಯೆ 4ರಲ್ಲಿ, 1951ರಲ್ಲಿ ಅಸ್ಸಾಂನ ಮುಸ್ಲಿಂ ಜನಸಂಖ್ಯೆ 19,95,936 ಎಂದು ತೋರಿಸಲಾಗಿದೆ. ಇದು ಒಟ್ಟು ಜನಸಂಖ್ಯೆಯ 22.60 ಪ್ರತಿಶತವಾಗಿತ್ತು. ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯು 1961 ರಲ್ಲಿ 27, 65,509 ಕ್ಕೆ ಏರಿತ್ತು. ಇದು ಒಟ್ಟು ಜನಸಂಖ್ಯೆಯ ಶೇ. 23.29 ರಷ್ಟಿತ್ತು. ಈ ದಾಖಲೆಯ ಪ್ರಕಾರ, 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 14ರಷ್ಟಿತ್ತು ಎಂಬ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆ ತಪ್ಪಾಗಿದೆ.

ಅಧಿಕೃತ ದಾಖಲೆಯ ಪ್ರಕಾರ, ಅಸ್ಸಾಂನಲ್ಲಿ 1951ರಲ್ಲಿ ಮುಸ್ಲಿಂ ಜನಸಂಖ್ಯೆ ಶೇ.22.60 ಇತ್ತು. 1961ರಲ್ಲಿ ಇದು ಶೇ. 23.29ಕ್ಕೆ ಏರಿಕೆಯಾಗಿತ್ತು. 2011ರ ಜನಗಣತಿ ಪ್ರಕಾರ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.34.22 ದಾಖಲಾಗಿತ್ತು. ಆ ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ, ಸರ್ಕಾರ ಗಣತಿ ನಡೆಸಿಲ್ಲ. ಆದರೂ, ಶೇ.40ರಷ್ಟು ಇರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...