Homeಫ್ಯಾಕ್ಟ್‌ಚೆಕ್FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ...

FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

- Advertisement -
- Advertisement -

ಈ ವರ್ಷಾಂತ್ಯದಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಜಾರ್ಖಂಡ್‌ನ ಸಹ-ಪ್ರಭಾರಿಯಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇಮಿಸಿದೆ. ಈ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶರ್ಮಾ ಅವರು ಇತ್ತೀಚೆಗೆ ಜಾರ್ಖಂಡ್‌ಗೆ ಭೇಟಿ ನೀಡಿದ್ದರು.

ಈ ವೇಳೆ ರಾಂಚಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಅಸ್ಸಾಂನಿಂದ ಬಂದಿದ್ದೇನೆ, ಜನಸಂಖ್ಯೆಯ ಬದಲಾವಣೆಯು ನನಗೆ ದೊಡ್ಡ ಸಮಸ್ಯೆಯಾಗಿದೆ. 1951ರಲ್ಲಿ, ಅಸ್ಸಾಂನ ಮುಸ್ಲಿಂ ಜನಸಂಖ್ಯೆಯು ಶೇಕಡ 14 ರಷ್ಟಿತ್ತು, ಇಂದು ಮುಸ್ಲಿಂ ಜನಸಂಖ್ಯೆಯು ಶೇಕಡ 40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ ಈ ವಿಷಯ ರಾಜಕೀಯವಲ್ಲ, ನನಗೆ ಇದು ಜೀವನ್ಮರಣ ಸಮಸ್ಯೆಯಾಗಿದೆ.”ಎಂದಿದ್ದರು.

ತನ್ನ ಹೇಳಿಕೆಯ ವಿಡಿಯೋವನ್ನು ಜುಲೈ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಶರ್ಮಾ ಅವರು “1951 ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಕೇವಲ 14 ಪ್ರತಿಶತದಷ್ಟಿತ್ತು, ಇಂದು ಮುಸ್ಲಿಮರ ಜನಸಂಖ್ಯೆಯು ಶೇಕಡಾ 40ಕ್ಕೆ ಏರಿದೆ ಬರೆದುಕೊಂಡಿದ್ದರು.

ಈ ವಿಷಯದ ಸತ್ಯಾಸತ್ಯತೆ ಪರಿಶೀಲಿಸದೆ ಸಿಎಂ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಹಲವು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಇವುಗಳಲ್ಲಿ ಹಿಂದೂಸ್ತಾನ್ ಟೈಮ್ಸ್, ರಿಪಬ್ಲಿಕ್ ಭಾರತ್, ಟೈಮ್ಸ್ ಆಫ್ ಇಂಡಿಯಾ, ದೈನಿಕ್ ಜಾಗರಣ್, ದಿ ಎಕನಾಮಿಕ್ಸ್ ಟೈಮ್ಸ್, ಝೀ ನ್ಯೂಸ್ ಇತ್ಯಾದಿ ಸೇರಿವೆ.

ಫ್ಯಾಕ್ಟ್‌ಚೆಕ್ : ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ನಾವು 1961ರ ಧಾರ್ಮಿಕ ಜನಗಣತಿ ವರದಿಯನ್ನು ಭಾರತ ಸರ್ಕಾರದ ವೆಬ್‌ಸೈಟ್ ‘ಸೆನ್ಸಸ್ ಇಂಡಿಯಾ’ದಲ್ಲಿ ಪರಿಶೀಲಿಸಿದ್ದೇವೆ. ವೆಬ್‌ಸೈಟ್‌ನಲ್ಲಿ 1961ರಲ್ಲಿ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಯಾವ ಧರ್ಮದ ಜನ ಸಂಖ್ಯೆ ಎಷ್ಟಿತ್ತು ಮತ್ತು 1951-61ರ ನಡುವಿನ ವ್ಯತ್ಯಾಸದ ಮಾಹಿತಿಯಿದೆ.

ವೆಬ್‌ಸೈಟ್‌ನಲ್ಲಿರುವ ದಾಖಲೆಯ ಪುಟ ಸಂಖ್ಯೆ 4ರಲ್ಲಿ, 1951ರಲ್ಲಿ ಅಸ್ಸಾಂನ ಮುಸ್ಲಿಂ ಜನಸಂಖ್ಯೆ 19,95,936 ಎಂದು ತೋರಿಸಲಾಗಿದೆ. ಇದು ಒಟ್ಟು ಜನಸಂಖ್ಯೆಯ 22.60 ಪ್ರತಿಶತವಾಗಿತ್ತು. ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆಯು 1961 ರಲ್ಲಿ 27, 65,509 ಕ್ಕೆ ಏರಿತ್ತು. ಇದು ಒಟ್ಟು ಜನಸಂಖ್ಯೆಯ ಶೇ. 23.29 ರಷ್ಟಿತ್ತು. ಈ ದಾಖಲೆಯ ಪ್ರಕಾರ, 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ. 14ರಷ್ಟಿತ್ತು ಎಂಬ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆ ತಪ್ಪಾಗಿದೆ.

ಅಧಿಕೃತ ದಾಖಲೆಯ ಪ್ರಕಾರ, ಅಸ್ಸಾಂನಲ್ಲಿ 1951ರಲ್ಲಿ ಮುಸ್ಲಿಂ ಜನಸಂಖ್ಯೆ ಶೇ.22.60 ಇತ್ತು. 1961ರಲ್ಲಿ ಇದು ಶೇ. 23.29ಕ್ಕೆ ಏರಿಕೆಯಾಗಿತ್ತು. 2011ರ ಜನಗಣತಿ ಪ್ರಕಾರ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.34.22 ದಾಖಲಾಗಿತ್ತು. ಆ ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ, ಸರ್ಕಾರ ಗಣತಿ ನಡೆಸಿಲ್ಲ. ಆದರೂ, ಶೇ.40ರಷ್ಟು ಇರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....