Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...