Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...