Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...