Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...