Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....