Homeಫ್ಯಾಕ್ಟ್‌ಚೆಕ್FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಅಖಿಲೇಶ್ ಅವರು ಕಾಂಪೌಂಡ್ ಅಥವಾ ಗೇಟ್‌ನ್ನು ಜಿಗಿದು ಹೋಗುವುದು, ಹಲವಾರು ಟಿವಿ ಚಾನೆಲ್‌ಗಳ ಕ್ಯಾಮರಾಗಳು ಮತ್ತು ಪತ್ರಕರ್ತರು ಆ ದೃಶ್ಯವನ್ನು ಸೆರೆ ಹಿಡಿಯುವುದು ಇದೆ. ‘ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಅಖಿಲೇಶ್ ಯಾದವ್ ಓಡಿ ಹೋಗಿದ್ದಾರೆ’ ಎಂಬ ಶೀರ್ಷಿಕೆಯಿಂದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

“ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಅಖಿಲೇಶ್ ಯಾದವ್ ಓಡಿಹೋದರು” ಎಂಬ ಶೀರ್ಷಿಕೆಯೊಂದಿಗೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ (@sadhvi?_Prachi)ಅವರು 18 ಸೆಕೆಂಡುಗಳ ಕ್ಲಿಪ್ ಅನ್ನು ಸೆಪ್ಟೆಂಬರ್ 4ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಬಳಿಕ ಸಾಧ್ವಿ ಅವರು ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ಅದು 2.3 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2 ಸಾವಿರ ಮಂದಿ ಶೇರ್ ಮಾಡಿದ್ದರು.

ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಸುನಂದಾ ರಾಯ್ (@SaffronSunanda)ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಪತ್ರಕರ್ತರು ಮೊಯೀದ್ ಖಾನ್ ಮತ್ತು ನವಾಬ್ ಯಾದವ್ ಅವರ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಕ್ಕೆ, ಅಖಿಲೇಶ್ ಯಾದವ್ ಮಾಧ್ಯಮಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಈ ಮನುಷ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲಿಟ್ ಮಾಡಿದ್ದರು. ಅಷ್ಟರಲ್ಲಿ ಅದು, 21,000 ವೀಕ್ಷಣೆಗಳನ್ನು ಪಡೆದಿತ್ತು.

ಇನ್ನೂ ಹಲವಾರು ಬಲಪಂಥೀಯ ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋ ಪೋಸ್ಟ್ ಮಾಡಿ “ಅಖಿಲೇಶ್ ಯಾದವ್ ಪತ್ರಕರ್ತರಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಬರೆಯಲಾಗಿತ್ತು.

ಫ್ಯಾಕ್ಟ್‌ಚೆಕ್ : ಅಖಿಲೇಶ್ ಯಾದವ್ ಅವರ ವೈರಲ್ ಪೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 17, 2023ರಂದು ಸಮಾಜವಾದಿ ಪಕ್ಷ (ಎಸ್‌ಪಿ)ಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಅಖಿಲೇಶ್ ಯಾದವ್ ಕಾಂಪೌಂಡ್ ಹಾರುವ ಫೋಟೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೋಟೋ ಕುರಿತು ವಿವರಣೆ ನೀಡಿರುವ ಸಮಾಜವಾದಿ ಪಕ್ಷ “ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಪ್ರಯುಕ್ತ ಅಕ್ಟೋಬರ್ 11, 2023ರಂದು ಲಕ್ನೋದ ಜಯಪ್ರಕಾಶ್ ನಾರಾಯಣ್ ಇಂಟರ್‌ನ್ಯಾಷನಲ್ ಸೆಂಟರ್ (ಜೆಪಿಎನ್ಐಸಿ) ನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸರ್ಕಾರ ಜೆಪಿಎನ್ಐಸಿ ಗೇಟ್‌ಗೆ ಬೀಗ ಹಾಕಿ ಒಳಗೆ ಪ್ರವೇಶಿಸದಂತೆ ತಡೆದಿತ್ತು. ಈ ವೇಳೆ ಅಖಿಲೇಶ್ ಯಾದವ್ ಅವರು ಗೇಟ್ ಹಾರಿ ಒಳನುಗ್ಗಿ ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ” ಎಂದು ತಿಳಿಸಿದೆ.

ಅಕ್ಟೋಬರ್ 11, 2023ರಂದು ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ವರದಿ ಪ್ರಕಟಿಸಿತ್ತು, ಅದರಲ್ಲೂ “ಜೆಪಿಎನ್ಐಸಿ ಪ್ರವೇಶಿಸಲು ಅಖಿಲೇಶ್ ಯಾದವ್ ಅವರಿಗೆ ಅವಕಾಶ ನಿರಕರಿಸಿದ್ದಕ್ಕೆ, ಅವರು ಕಾಂಪೌಂಡ್ ಹಾರಿ ಜೆಪಿ ಅವರಿಗೆ ಗೌರವಾರ್ಪಣೆ ಮಾಡಿ ಬಂದಿದ್ದಾರೆ” ಎಂದು ತಿಳಿಸಲಾಗಿತ್ತು.

ಅಕ್ಟೋಬರ್ 11, 2023ರಂದು ದಿ ಎಕನಾಮಿಕ್ಸ್ ಟೈಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ವಿಡಿಯೋ ಹಂಚಿಕೊಂಡು “ಜಯಪ್ರಕಾಶ್ ನಾರಾಯಣ ಅವರಿಗೆ ಗೌರವ ಸಲ್ಲಿಸಲು ಅಖಿಲೇಶ್ ಯಾದವ್ ಅವರು ಜೆಪಿಎನ್‌ಐಸಿಯ ಕಾಂಪೌಂಡ್ ಹಾರಿದರು” ಎಂದು ಶೀರ್ಷಿಕೆ ಕೊಡಲಾಗಿತ್ತು.

ಒಟ್ಟಿನಲ್ಲಿ “ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅವಕಾಶ ನಿರಾಕರಿಸಿ ಜೆಪಿಎನ್‌ಐಸಿ ಗೇಟ್‌ಗೆ ಸರ್ಕಾರ ಬೀಗ ಹಾಕಿದ್ದಕ್ಕೆ ಅಖಿಲೇಶ್ ಯಾದವ್ ಗೇಟ್ ಹಾರಿ ಒಳ ಹೋಗಿದ್ದರು. ಆ ವಿಡಿಯೋ ಮತ್ತು ಫೋಟೋ ಹಂಚಿಕೊಂಡು “ಅಖಿಲೇಶ್ ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....