Homeಫ್ಯಾಕ್ಟ್‌ಚೆಕ್FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಅಖಿಲೇಶ್ ಅವರು ಕಾಂಪೌಂಡ್ ಅಥವಾ ಗೇಟ್‌ನ್ನು ಜಿಗಿದು ಹೋಗುವುದು, ಹಲವಾರು ಟಿವಿ ಚಾನೆಲ್‌ಗಳ ಕ್ಯಾಮರಾಗಳು ಮತ್ತು ಪತ್ರಕರ್ತರು ಆ ದೃಶ್ಯವನ್ನು ಸೆರೆ ಹಿಡಿಯುವುದು ಇದೆ. ‘ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಅಖಿಲೇಶ್ ಯಾದವ್ ಓಡಿ ಹೋಗಿದ್ದಾರೆ’ ಎಂಬ ಶೀರ್ಷಿಕೆಯಿಂದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

“ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಅಖಿಲೇಶ್ ಯಾದವ್ ಓಡಿಹೋದರು” ಎಂಬ ಶೀರ್ಷಿಕೆಯೊಂದಿಗೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ (@sadhvi?_Prachi)ಅವರು 18 ಸೆಕೆಂಡುಗಳ ಕ್ಲಿಪ್ ಅನ್ನು ಸೆಪ್ಟೆಂಬರ್ 4ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಬಳಿಕ ಸಾಧ್ವಿ ಅವರು ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ಅದು 2.3 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2 ಸಾವಿರ ಮಂದಿ ಶೇರ್ ಮಾಡಿದ್ದರು.

ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಸುನಂದಾ ರಾಯ್ (@SaffronSunanda)ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಪತ್ರಕರ್ತರು ಮೊಯೀದ್ ಖಾನ್ ಮತ್ತು ನವಾಬ್ ಯಾದವ್ ಅವರ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಕ್ಕೆ, ಅಖಿಲೇಶ್ ಯಾದವ್ ಮಾಧ್ಯಮಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಈ ಮನುಷ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲಿಟ್ ಮಾಡಿದ್ದರು. ಅಷ್ಟರಲ್ಲಿ ಅದು, 21,000 ವೀಕ್ಷಣೆಗಳನ್ನು ಪಡೆದಿತ್ತು.

ಇನ್ನೂ ಹಲವಾರು ಬಲಪಂಥೀಯ ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋ ಪೋಸ್ಟ್ ಮಾಡಿ “ಅಖಿಲೇಶ್ ಯಾದವ್ ಪತ್ರಕರ್ತರಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಬರೆಯಲಾಗಿತ್ತು.

ಫ್ಯಾಕ್ಟ್‌ಚೆಕ್ : ಅಖಿಲೇಶ್ ಯಾದವ್ ಅವರ ವೈರಲ್ ಪೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 17, 2023ರಂದು ಸಮಾಜವಾದಿ ಪಕ್ಷ (ಎಸ್‌ಪಿ)ಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಅಖಿಲೇಶ್ ಯಾದವ್ ಕಾಂಪೌಂಡ್ ಹಾರುವ ಫೋಟೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೋಟೋ ಕುರಿತು ವಿವರಣೆ ನೀಡಿರುವ ಸಮಾಜವಾದಿ ಪಕ್ಷ “ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಪ್ರಯುಕ್ತ ಅಕ್ಟೋಬರ್ 11, 2023ರಂದು ಲಕ್ನೋದ ಜಯಪ್ರಕಾಶ್ ನಾರಾಯಣ್ ಇಂಟರ್‌ನ್ಯಾಷನಲ್ ಸೆಂಟರ್ (ಜೆಪಿಎನ್ಐಸಿ) ನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸರ್ಕಾರ ಜೆಪಿಎನ್ಐಸಿ ಗೇಟ್‌ಗೆ ಬೀಗ ಹಾಕಿ ಒಳಗೆ ಪ್ರವೇಶಿಸದಂತೆ ತಡೆದಿತ್ತು. ಈ ವೇಳೆ ಅಖಿಲೇಶ್ ಯಾದವ್ ಅವರು ಗೇಟ್ ಹಾರಿ ಒಳನುಗ್ಗಿ ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ” ಎಂದು ತಿಳಿಸಿದೆ.

ಅಕ್ಟೋಬರ್ 11, 2023ರಂದು ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ವರದಿ ಪ್ರಕಟಿಸಿತ್ತು, ಅದರಲ್ಲೂ “ಜೆಪಿಎನ್ಐಸಿ ಪ್ರವೇಶಿಸಲು ಅಖಿಲೇಶ್ ಯಾದವ್ ಅವರಿಗೆ ಅವಕಾಶ ನಿರಕರಿಸಿದ್ದಕ್ಕೆ, ಅವರು ಕಾಂಪೌಂಡ್ ಹಾರಿ ಜೆಪಿ ಅವರಿಗೆ ಗೌರವಾರ್ಪಣೆ ಮಾಡಿ ಬಂದಿದ್ದಾರೆ” ಎಂದು ತಿಳಿಸಲಾಗಿತ್ತು.

ಅಕ್ಟೋಬರ್ 11, 2023ರಂದು ದಿ ಎಕನಾಮಿಕ್ಸ್ ಟೈಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ವಿಡಿಯೋ ಹಂಚಿಕೊಂಡು “ಜಯಪ್ರಕಾಶ್ ನಾರಾಯಣ ಅವರಿಗೆ ಗೌರವ ಸಲ್ಲಿಸಲು ಅಖಿಲೇಶ್ ಯಾದವ್ ಅವರು ಜೆಪಿಎನ್‌ಐಸಿಯ ಕಾಂಪೌಂಡ್ ಹಾರಿದರು” ಎಂದು ಶೀರ್ಷಿಕೆ ಕೊಡಲಾಗಿತ್ತು.

ಒಟ್ಟಿನಲ್ಲಿ “ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅವಕಾಶ ನಿರಾಕರಿಸಿ ಜೆಪಿಎನ್‌ಐಸಿ ಗೇಟ್‌ಗೆ ಸರ್ಕಾರ ಬೀಗ ಹಾಕಿದ್ದಕ್ಕೆ ಅಖಿಲೇಶ್ ಯಾದವ್ ಗೇಟ್ ಹಾರಿ ಒಳ ಹೋಗಿದ್ದರು. ಆ ವಿಡಿಯೋ ಮತ್ತು ಫೋಟೋ ಹಂಚಿಕೊಂಡು “ಅಖಿಲೇಶ್ ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...