Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...