Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...