Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...