Homeಫ್ಯಾಕ್ಟ್‌ಚೆಕ್FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ...

FACT CHECK : ಭಾರತ ಪಾಕ್‌ ಮೇಲೆ ಯುದ್ದ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್‌ ಸೇನೆಗೆ ಸೇರುತ್ತಾರೆ ಎಂದು ಹೇಳಿದ್ರಾ ಅಸಾದುದ್ದೀನ್ ಓವೈಸಿ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ AIMIM ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಸುದ್ದಿಯ ಪೇಪರ್ ಕಟಿಂಗ್‌ವೊಂದು ವೈರಲ್ ಆಗಿದೆ. “ಭಾರತ ಪಾಕ್ ಮೇಲೆ ದಾಳಿ ಮಾಡಿದರೆ, ಭಾರತೀಯ ಮುಸ್ಲಿಮರು ಪಾಕ್ ಸೇನೆಗೆ ಸೇರುತ್ತಾರೆ: ಓವೈಸಿ” ಎಂಬ ಶೀರ್ಷಿಕೆಯಿರುವ ನ್ಯೂಸ್ ಪೇಪರ್ ಕಟಿಂಗ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಭಾರತವು ಪಾಕಿಸ್ತಾನದೊಂದಿಗೆ ಯುದ್ಧದಲ್ಲಿ ತೊಡಗಿದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಸೇನೆಗೆ ಸೇರುತ್ತಾರೆ ಎಂದು ಅಸಾದುದ್ದೀನ್ ಓವೈಸಿ 10 ವರ್ಷದ ಹಿಂದೆ ಹೇಳಿದ್ದರು ಎಂಬ ಪೋಸ್ಟ್‌ಅನ್ನು ಮತ್ತೊಬ್ಬ ಬಳಕೆದಾರರು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರೊಬ್ಬರು ಇದೇ ಪ್ರತಿಪಾದನೆಯೊಂದಿಗೆ ಅಸಾದುದ್ದೀನ್ ಓವೈಸಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುತ್ತಾರೆ. ಈತ ಭಾರತಕ್ಕೆ ನಿಷ್ಟನಾಗಿಲ್ಲ ಈತನನ್ನು ಸಂಸತ್ತಿಗೆ ಯಾಕೆ ಕಳಿಸಬೇಕು? ಈತನನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂದರೆ ಅರ್ಥ ಮಾಡಿಕೊಳ್ಳಿ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಇಂತಹ ಹೇಳಿಕೆಯನ್ನು ಅಸಾದುದ್ದೀನ್ ಓವೈಸಿ ನೀಡಿದ್ದಾರೆಯೇ ಎಂದು  ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಎಐಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಓವೈಸಿ ಇಂತಹ ಹೇಳಿಕೆ ನೀಡಿದ್ದರು ಎಂಬುದನ್ನು ದಾಖಲಿಸಿ ಯಾವುದೇ ಪ್ರತಿಷ್ಠಿತ ಸುದ್ದಿ ನಿಯತಕಾಲಿಕೆ ಅಥವಾ ಮಾಧ್ಯಮಗಳು ವರದಿ ಮಾಡಿಲ್ಲ.

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೀವರ್ಡ್ ಸರ್ಚ್ ನಡೆಸಿದಾಗ, 2014 ರಲ್ಲಿ ಕಾಶ್ಮೀರ ಅಬ್ಸರ್ವರ್‌ನ ನಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. “ಭಾರತವು ಪಾಕಿಸ್ತಾನದೊಂದಿಗೆ ಯುದ್ಧಕ್ಕೆ ಹೋದರೆ, 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನದ ಸೈನ್ಯಕ್ಕೆ ಸೇರುತ್ತಾರೆ” ಎಂಬ ಹೇಳಿಕೆಯನ್ನು ಅಸಾದುದ್ದೀನ್‌ಗೆ ಆರೋಪಿಸುವ ಲೇಖನವೊಂದು ಲಭ್ಯವಾಗಿದೆ. ಅಸಾದುದ್ದೀನ್ ಇಂತಹ ಹೇಳಿಕೆಗಳನ್ನು ನೀಡಿದ್ದರೆ, ದೇಶಾದ್ಯಂತ ಪ್ರಮುಖ ಪತ್ರಿಕೆಗಳು ಮತ್ತು ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ.

 

ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನ ಆಧಾರರಹಿತವಾಗಿದ್ದು ಅದನ್ನು ಮಾಡಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳುವುದಾಗಿ 2 ಸೆಪ್ಟೆಂಬರ್ 2014 ರಂದು ಅಸಾದುದ್ದೀನ್ ಓವೈಸಿ ಅವರ ಅಧಿಕೃತ X ಹ್ಯಾಂಡಲ್‌ನಿಂದ ಮಾಡಲಾದ ಟ್ವೀಟ್ ವೊಂದು ಲಭ್ಯವಾಗಿದ್ದು “ ಕಾಶ್ಮೀರ ಅಬ್ಸರ್ವರ್‌ನ ಸಂಸ್ಥೆ ಕ್ಷಮೆಯಾಚಿಸದಿದ್ದರೆ, ನನ್ನ ವಕೀಲರು ಅವರಿಗೆ ಕಾನೂನು ಪ್ರಕಾರ ನೋಟಿಸ್ ಕಳುಹಿಸುತ್ತಾರೆ, ಇಲ್ಲದಿದ್ದರೆ ದಂಡ ವಿಧಿಸುತ್ತಾರೆ ನಂತರ ಅವರ ವಿರುದ್ಧ ಅಪರಾಧ ಮಾನನಷ್ಟ ಮೊಕದ್ದಮೆ ಹೂಡುತ್ತಾರೆ” ಎಂದು ಹಂಚಿಕೊಂಡಿರುವ ಪೋಸ್ಟ್‌ ಲಭ್ಯವಾಗಿದೆ.

ಇದಲ್ಲದೆ, 10 ಜನವರಿ 2015 ರಂದು ಅಪ್‌ಲೋಡ್ ಮಾಡಲಾದ ಹೆಡ್‌ಲೈನ್ಸ್ ಟುಡೇ ಜೊತೆಗಿನ ಒವೈಸಿ ಸಂದರ್ಶನದ ವಿಡಿಯೋ ಲಭ್ಯವಾಗಿದೆ. “ಭಾರತವು ಪಾಕಿಸ್ತಾನದ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದರೆ ?? ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರಾ ? ಎಂದು ಕರಣ್ ತಾಫರ್ ಕೇಳಿದ ಪ್ರಶ್ನೆಗೆ ಉತ್ತರಿಸುವ ಅಸಾದುದ್ದೀನ್ ಓವೈಸಿ ”ತಮ್ಮ ಮೇಲೆ ಆರೋಪಿಸಿದ ಹೇಳಿಕೆಗಳನ್ನು ನಿರಾಕರಿಸಿದರು. ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಆಧಾರ ರಹಿತ ಹೇಳಿಕೆಗಳಿಗಾಗಿ ಕೆಲವು ಸಂಘಟನೆಗಳು ಕ್ಷಮೆಯಾಚಿಸಿವೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ‘ಭಾರತ ಪಾಕ್ ಮೇಲೆ ದಾಳಿ ಮಾಡಿದರೆ ಭಾರತೀಯ ಮುಸ್ಲಿಮರು ಪಾಕ್ ಸೇನೆ ಸೇರುತ್ತಾರೆ’ ಎಂದು ಹೇಳಿಲ್ಲ ಎಂಬುದು ಸ್ಪಷ್ಟವಾಗಿದೆ. ಇಂತಹ ಸುದ್ದಿ ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...