Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...