Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...