Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...