Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...