Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...