Homeಫ್ಯಾಕ್ಟ್‌ಚೆಕ್FACT CHECK : 'ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಶಾಸಕ ಯತ್ನಾಳ್ ಅವರು ವಿಡಿಯೋ ಹಂಚಿಕೊಂಡಂತೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಟಿವಿ9 ಸುದ್ದಿಯ ವಿಡಿಯೋ ಗಮನಿಸಿದಾಗ, ಅದು ಡಿಸೆಂಬರ್ 4, 2023ರಂದು ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮಗಳ ಸಮಾವೇಶದ್ದು ಎಂದು ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, “ನಿಮಗೂ ಶಿಕ್ಷಣ ಸಿಗಬೇಕು, ನಿಮ್ಮ ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಆಗಬೇಕು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು. ನೀವು ಕೂಡ ಭಾರತೀಯರಲ್ವಾ? ಈ ದೇಶ ನಿಮಗೂ ಸೇರಬೇಕು, ನನಗೂ ಸೇರಬೇಕು. ಈ ದೇಶದ ಸಂಪತ್ತು ನಿಮಗೂ ಸಿಗಬೇಕು, ನನಗೂ ಸಿಗಬೇಕು. ಈ ದೇಶದ ಸಂಪತ್ತನ್ನು ನಿಮಗೂ ಹಂಚುವ ಕೆಲಸ ಮಾಡುತ್ತೇನೆ. ನಿಮಗೆ ಯಾವುದೇ ಕಾರಣಕ್ಕೆ ಕೂಡ ಅನ್ಯಾಯ ಆಗಲು ಬಿಡಲ್ಲ. ನಿಮ್ಮ ರಕ್ಷಣೆ ಮಾಡುವಂತಹ ಕೆಲಸ ಮಾಡುತ್ತೇನೆ. ಆದೇ ರೀತಿ ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿದ್ದರು.

ಇದೇ ವಿಷಯವನ್ನು ಡಿಸೆಂಬರ್ 5, 2023ರಂದು “Siddaramaiah: ಯಾವುದೇ ಕಾರಣಕ್ಕೂ ಅನ್ಯಾಯ ಆಗೋಕೆ ಬಿಡಲ್ಲ: ಮುಸ್ಲಿಮರಿಗೆ ಸಿಎಂ ಭರವಸೆ” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌ 18 ಕನ್ನಡ ಮಾಡಿದ್ದ ವರದಿಯಲ್ಲೂ ಉಲ್ಲೇಖಿಸಿದೆ.

ವರದಿ ಲಿಂಕ್ ಇಲ್ಲಿದೆ 

ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮುಸ್ಲಿಮರಿಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನ್ಯಾಯಯುತವಾಗಿ ಮುಸ್ಲಿಮರಿಗೆ ಸಿಗಬೇಕಾದ ಸಂಪತ್ತನ್ನು ಮುಖ್ಯಮಂತ್ರಿಯಾಗಿ ಕೊಡಿಸುವಂತ ಕೆಲಸ ಮಾಡುತ್ತೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಅಲ್ಲದೆ, ಈ ದೇಶದ ಸಂಪತ್ತನ್ನು ಸಂಪೂರ್ಣವಾಗಿ ಮುಸ್ಲಿಮರಿಗೆ ಹಂಚುತ್ತೇನೆ ಎಂದಿಲ್ಲ. ಸಿಎಂ ತನ್ನ ಭಾಷಣದಲ್ಲಿ “ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿರುವುದು ಗಮನಿಸಬಹುದು. ಸಿಎಂ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಭಾಷಣ ಮಾಡಿದ್ದರಿಂದ ಮುಸ್ಲಿಂ ಸಮುದಾಯಕ್ಕೆ ಸಿಗಬೇಕಾದ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ಆಯಾ ಸಮುದಾಯದ ಕಾರ್ಯಕ್ರಮದಲ್ಲಿ ಸಮುದಾಯಕ್ಕೆ ಸರ್ಕಾರದಿಂದ ಸಿಗಬೇಕಾದ ಹಕ್ಕು, ಸೌಲಭ್ಯಗಳ ಬಗ್ಗೆ ಜನ ಪ್ರತಿನಿಧಿಗಳು ಮಾತನಾಡುವುದು, ಭರವಸೆ ಕೊಡುವುದು ಸಾಮಾನ್ಯ ಪ್ರಕ್ರಿಯೆ.

ಗಮನಾರ್ಹವಾಗಿ, ಶಾಸಕ ಯತ್ನಾಳ್ ಅವರು ಹಂಚಿಕೊಂಡ ವಿಡಿಯೋ 5 ತಿಂಗಳು ಹಳೆಯದು. ಈಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಹಳೆಯ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...