Homeಫ್ಯಾಕ್ಟ್‌ಚೆಕ್FACT CHECK : 'ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಶಾಸಕ ಯತ್ನಾಳ್ ಅವರು ವಿಡಿಯೋ ಹಂಚಿಕೊಂಡಂತೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಟಿವಿ9 ಸುದ್ದಿಯ ವಿಡಿಯೋ ಗಮನಿಸಿದಾಗ, ಅದು ಡಿಸೆಂಬರ್ 4, 2023ರಂದು ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮಗಳ ಸಮಾವೇಶದ್ದು ಎಂದು ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, “ನಿಮಗೂ ಶಿಕ್ಷಣ ಸಿಗಬೇಕು, ನಿಮ್ಮ ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಆಗಬೇಕು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು. ನೀವು ಕೂಡ ಭಾರತೀಯರಲ್ವಾ? ಈ ದೇಶ ನಿಮಗೂ ಸೇರಬೇಕು, ನನಗೂ ಸೇರಬೇಕು. ಈ ದೇಶದ ಸಂಪತ್ತು ನಿಮಗೂ ಸಿಗಬೇಕು, ನನಗೂ ಸಿಗಬೇಕು. ಈ ದೇಶದ ಸಂಪತ್ತನ್ನು ನಿಮಗೂ ಹಂಚುವ ಕೆಲಸ ಮಾಡುತ್ತೇನೆ. ನಿಮಗೆ ಯಾವುದೇ ಕಾರಣಕ್ಕೆ ಕೂಡ ಅನ್ಯಾಯ ಆಗಲು ಬಿಡಲ್ಲ. ನಿಮ್ಮ ರಕ್ಷಣೆ ಮಾಡುವಂತಹ ಕೆಲಸ ಮಾಡುತ್ತೇನೆ. ಆದೇ ರೀತಿ ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿದ್ದರು.

ಇದೇ ವಿಷಯವನ್ನು ಡಿಸೆಂಬರ್ 5, 2023ರಂದು “Siddaramaiah: ಯಾವುದೇ ಕಾರಣಕ್ಕೂ ಅನ್ಯಾಯ ಆಗೋಕೆ ಬಿಡಲ್ಲ: ಮುಸ್ಲಿಮರಿಗೆ ಸಿಎಂ ಭರವಸೆ” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌ 18 ಕನ್ನಡ ಮಾಡಿದ್ದ ವರದಿಯಲ್ಲೂ ಉಲ್ಲೇಖಿಸಿದೆ.

ವರದಿ ಲಿಂಕ್ ಇಲ್ಲಿದೆ 

ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮುಸ್ಲಿಮರಿಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನ್ಯಾಯಯುತವಾಗಿ ಮುಸ್ಲಿಮರಿಗೆ ಸಿಗಬೇಕಾದ ಸಂಪತ್ತನ್ನು ಮುಖ್ಯಮಂತ್ರಿಯಾಗಿ ಕೊಡಿಸುವಂತ ಕೆಲಸ ಮಾಡುತ್ತೇನೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಅಲ್ಲದೆ, ಈ ದೇಶದ ಸಂಪತ್ತನ್ನು ಸಂಪೂರ್ಣವಾಗಿ ಮುಸ್ಲಿಮರಿಗೆ ಹಂಚುತ್ತೇನೆ ಎಂದಿಲ್ಲ. ಸಿಎಂ ತನ್ನ ಭಾಷಣದಲ್ಲಿ “ಎಲ್ಲಾ ಧರ್ಮ, ಜಾತಿಯವರಿಗೂ ರಕ್ಷಣೆ ಕೊಡುವಂತಹ ಕೆಲಸ ಮಾಡುತ್ತೇನೆ” ಎಂದಿರುವುದು ಗಮನಿಸಬಹುದು. ಸಿಎಂ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಭಾಷಣ ಮಾಡಿದ್ದರಿಂದ ಮುಸ್ಲಿಂ ಸಮುದಾಯಕ್ಕೆ ಸಿಗಬೇಕಾದ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ಆಯಾ ಸಮುದಾಯದ ಕಾರ್ಯಕ್ರಮದಲ್ಲಿ ಸಮುದಾಯಕ್ಕೆ ಸರ್ಕಾರದಿಂದ ಸಿಗಬೇಕಾದ ಹಕ್ಕು, ಸೌಲಭ್ಯಗಳ ಬಗ್ಗೆ ಜನ ಪ್ರತಿನಿಧಿಗಳು ಮಾತನಾಡುವುದು, ಭರವಸೆ ಕೊಡುವುದು ಸಾಮಾನ್ಯ ಪ್ರಕ್ರಿಯೆ.

ಗಮನಾರ್ಹವಾಗಿ, ಶಾಸಕ ಯತ್ನಾಳ್ ಅವರು ಹಂಚಿಕೊಂಡ ವಿಡಿಯೋ 5 ತಿಂಗಳು ಹಳೆಯದು. ಈಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಹಳೆಯ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...