Homeಫ್ಯಾಕ್ಟ್‌ಚೆಕ್Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ಇನ್ನೊಂದು ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಒಂದು ಭಾರೀ ವೈರಲ್ ಆಗಿದೆ. ಅನೇಕ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

‘Murali Purshotham’ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದು, “ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ‘ರಿಷಿ ಬಾಗ್ರೀ’ (Rishi Bagree)ಕೂಡ ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಸಿದ್ದರಾಮಯ್ಯ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಅನೇಕ ಎಕ್ಸ್ ಬಳಕೆದಾರರು ಮರು ಟ್ವೀಟ್ ಮಾಡಿದ್ದಾರೆ. ಆದರೆ, ರಿಷಿ ಬಾಗ್ರೀ ಪ್ರಸ್ತುತ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

 

‘BJP Intellectual Cell- Bengaluru (Modi Ka Parivar)’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಸಿದ್ದರಾಮಯ್ಯ ಅವರದ್ದು. ಆದರೆ ಸಾಹೇಬರು ಇದೆ ಜನಮದಲ್ಲಿ ವಿಶೇಷ ಸಮುದಾಯದ ತುಷ್ಟೀಕರಣ ರಾಜಕಾರಣ ಆರಂಭಿಸಿದ್ದಾರೆ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕದ ಕೆಲ ಬಿಜೆಪಿ ನಾಯಕರು ಸೇರಿದಂತೆ, ಇನ್ನೂ ಹಲವರು ವೈರಲ್ ವಿಡಿಯೋ ಹಂಚಿಕೊಂಡಿದ್ದರು. ಆದರೆ, ಈಗ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್ : ಸಿಎಂ ಸಿದ್ದರಾಮಯ್ಯ ಕುರಿತ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಸಿಎಂ ಭಾಷಣದ ಮೂಲ ವಿಡಿಯೋವನ್ನು ಹುಡುಕಿದೆ.

ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್‌ ಹಾಕಿ ಹುಡುಕಾಡಿದಾಗ ನಮಗೆ ಯೋಯೋ ಟಿವಿ (yoyo Tv) ಎಂಬ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ 29:45 ನಿಮಿಷದ ವಿಡಿಯೋವೊಂದು ಸಿಕ್ಕಿದೆ.

‘ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಭಾಷಣ’ ಎಂಬ ತಂಬ್‌ನೈಲ್ ಶೀರ್ಷಿಕೆಯಲ್ಲಿ ಇತ್ತೀಚೆಗೆ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ, 13 ನಿಮಿಷ 36 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೋವನ್ನು 13 ನಿಮಿಷ 26 ಸೆಕೆಂಡ್‌ನಿಂದ 13 ನಿಮಿಷ 44 ಸೆಕೆಂಡ್‌ಗಳ ನಡುವೆ ಸರಿಯಾಗಿ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಸಂಪೂರ್ಣ ಮಾತುಗಳು ಇವೆ. ” ಅದರಲ್ಲಿ, ಇದೇ ದೇವೆಗೌಡರು ನಾನು ಯಾವ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ. ಏನಾದರು ಇನ್ನೊಂದು ಜನ್ಮ ಇದೇ ಎನ್ನುದಾದರೆ, ಮುಂದಿನ ಜನ್ಮದಲ್ಲಿ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಇಲ್ಲಿ, ಮುಂದಿನ ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದು ದೇವೆಗೌಡರು ಹೇಳಿದ್ದರು. ಅಂತಹ ದೇವೆಗೌಡರು ಈಗ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂಬುವುದಾಗಿದೆ ಸಿಎಂ ಸಿದ್ದರಾಮಯ್ಯ ಅವರ ಮಾತಿನ ಆರ್ಥ. ಆದರೆ, ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ‘ದೇವೆಗೌಡರು ಹೇಳಿದ್ದರು’ ಎಂಬುವುದನ್ನು ಕಟ್ ಮಾಡಿ ಹಂಚುವ ಮೂಲಕ, ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿದ್ದಾಗಿ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನೇ ನಿಜವೆಂದು ನಂಬಿದ ಅನೇಕ ಮಂದಿ ವಿಡಿಯೋ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ಲಭ್ಯವಿರುವ ವಿಡಿಯೋದ 12ನೇ ನಿಮಿಷದಲ್ಲಿ, “ಅವರು (ಜೆಡಿಎಸ್) ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ, ನಮ್ಮ ನಾಯಕರು ಅವರ (ಕುಮಾರಸ್ವಾಮಿ) ಮನೆಗೆ ಹೋಗಿಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು. ನಾವು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಏಕೆಂದರೆ, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವುದು ನಮಗೆ ಇಷ್ಟವಿರಲಿಲ್ಲ. ನಂತರ, ಅವರ ಪಕ್ಷವನ್ನು ಮುರಿದವರು ಯಾರು? ಯಡಿಯೂರಪ್ಪನವರು. ಬಿಜೆಪಿ ಆಪರೇಷನ್ ಕಮಲ ಮಾಡಿ 17 ಶಾಸಕರಿಗೆ ಹಣ ನೀಡಿ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತು”ಎಂದು ಹೇಳಿದ್ದಾರೆ.

ವೈರಲ್ ಕ್ಲಿಪ್‌ಗೆ ಸಂಬಂಧಿಸಿದ ಕಾರ್ಯಕ್ರಮದ ವರದಿಯನ್ನು ಹಿಂದುಸ್ತಾನ್ ಟೈಮ್ಸ್ ಮಾರ್ಚ್ 11ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. “ದೇವೇಗೌಡರು ತಮ್ಮ ಉಳಿವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ” ಎಂಬ ಶೀರ್ಷಿಕೆಯ ವರದಿಯಲ್ಲಿ, ಜನತಾ ದಳ (ಜಾತ್ಯತೀತ) ಪಕ್ಷದ ನಾಯಕ ಹೆಚ್‌ಡಿ ದೇವೇಗೌಡರು ತಮ್ಮ ಪಕ್ಷದ ಉಳಿವಿಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾನುವಾರ ಮಂಡ್ಯದ ಕಂಗೇರಿಯಲ್ಲಿ ನಡೆದ ಶಿಕ್ಷಕರ ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಮಾತನಾಡಿದರು” ಎಂದು ಬರೆಯಲಾಗಿದೆ.

ವರದಿಯ ಲಿಂಕ್ ಇಲ್ಲಿದೆ 

ಮಾರ್ಚ್‌ 11ರಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕಿದ್ದ ಸಿಎಂ ಸಿದ್ದರಾಯ್ಯ “ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಪ್ರಶ್ನಿಸಿದ್ದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆಯು ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬರೆದುಕೊಂಡಿದ್ದರು.

ಲಭ್ಯವಿರುವ ಎಲ್ಲಾ ಮೂಲಗಳನ್ನು ಪರಿಶೀಲಿಸಿ ನೋಡಿದಾಗ, ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿದ್ದರು ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ ಹೊರತು, ನಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿಲ್ಲ. ಸಿಎಂ ಭಾಷಣವನ್ನು ಎಡಿಟ್ ಮಾಡಿ ತಪ್ಪಾಗಿ ಹಂಚುತ್ತಿರುವುದು ಈ ಮೂಲಕ ಖಚಿತವಾಗಿದೆ.

ಇದನ್ನೂ ಓದಿ : Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...