Homeಫ್ಯಾಕ್ಟ್‌ಚೆಕ್Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ಇನ್ನೊಂದು ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಒಂದು ಭಾರೀ ವೈರಲ್ ಆಗಿದೆ. ಅನೇಕ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

‘Murali Purshotham’ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದು, “ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ‘ರಿಷಿ ಬಾಗ್ರೀ’ (Rishi Bagree)ಕೂಡ ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಸಿದ್ದರಾಮಯ್ಯ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಅನೇಕ ಎಕ್ಸ್ ಬಳಕೆದಾರರು ಮರು ಟ್ವೀಟ್ ಮಾಡಿದ್ದಾರೆ. ಆದರೆ, ರಿಷಿ ಬಾಗ್ರೀ ಪ್ರಸ್ತುತ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

 

‘BJP Intellectual Cell- Bengaluru (Modi Ka Parivar)’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಸಿದ್ದರಾಮಯ್ಯ ಅವರದ್ದು. ಆದರೆ ಸಾಹೇಬರು ಇದೆ ಜನಮದಲ್ಲಿ ವಿಶೇಷ ಸಮುದಾಯದ ತುಷ್ಟೀಕರಣ ರಾಜಕಾರಣ ಆರಂಭಿಸಿದ್ದಾರೆ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕದ ಕೆಲ ಬಿಜೆಪಿ ನಾಯಕರು ಸೇರಿದಂತೆ, ಇನ್ನೂ ಹಲವರು ವೈರಲ್ ವಿಡಿಯೋ ಹಂಚಿಕೊಂಡಿದ್ದರು. ಆದರೆ, ಈಗ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್ : ಸಿಎಂ ಸಿದ್ದರಾಮಯ್ಯ ಕುರಿತ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಸಿಎಂ ಭಾಷಣದ ಮೂಲ ವಿಡಿಯೋವನ್ನು ಹುಡುಕಿದೆ.

ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್‌ ಹಾಕಿ ಹುಡುಕಾಡಿದಾಗ ನಮಗೆ ಯೋಯೋ ಟಿವಿ (yoyo Tv) ಎಂಬ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ 29:45 ನಿಮಿಷದ ವಿಡಿಯೋವೊಂದು ಸಿಕ್ಕಿದೆ.

‘ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಭಾಷಣ’ ಎಂಬ ತಂಬ್‌ನೈಲ್ ಶೀರ್ಷಿಕೆಯಲ್ಲಿ ಇತ್ತೀಚೆಗೆ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ, 13 ನಿಮಿಷ 36 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೋವನ್ನು 13 ನಿಮಿಷ 26 ಸೆಕೆಂಡ್‌ನಿಂದ 13 ನಿಮಿಷ 44 ಸೆಕೆಂಡ್‌ಗಳ ನಡುವೆ ಸರಿಯಾಗಿ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಸಂಪೂರ್ಣ ಮಾತುಗಳು ಇವೆ. ” ಅದರಲ್ಲಿ, ಇದೇ ದೇವೆಗೌಡರು ನಾನು ಯಾವ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ. ಏನಾದರು ಇನ್ನೊಂದು ಜನ್ಮ ಇದೇ ಎನ್ನುದಾದರೆ, ಮುಂದಿನ ಜನ್ಮದಲ್ಲಿ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಇಲ್ಲಿ, ಮುಂದಿನ ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದು ದೇವೆಗೌಡರು ಹೇಳಿದ್ದರು. ಅಂತಹ ದೇವೆಗೌಡರು ಈಗ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂಬುವುದಾಗಿದೆ ಸಿಎಂ ಸಿದ್ದರಾಮಯ್ಯ ಅವರ ಮಾತಿನ ಆರ್ಥ. ಆದರೆ, ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ‘ದೇವೆಗೌಡರು ಹೇಳಿದ್ದರು’ ಎಂಬುವುದನ್ನು ಕಟ್ ಮಾಡಿ ಹಂಚುವ ಮೂಲಕ, ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿದ್ದಾಗಿ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನೇ ನಿಜವೆಂದು ನಂಬಿದ ಅನೇಕ ಮಂದಿ ವಿಡಿಯೋ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ಲಭ್ಯವಿರುವ ವಿಡಿಯೋದ 12ನೇ ನಿಮಿಷದಲ್ಲಿ, “ಅವರು (ಜೆಡಿಎಸ್) ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ, ನಮ್ಮ ನಾಯಕರು ಅವರ (ಕುಮಾರಸ್ವಾಮಿ) ಮನೆಗೆ ಹೋಗಿಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು. ನಾವು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಏಕೆಂದರೆ, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವುದು ನಮಗೆ ಇಷ್ಟವಿರಲಿಲ್ಲ. ನಂತರ, ಅವರ ಪಕ್ಷವನ್ನು ಮುರಿದವರು ಯಾರು? ಯಡಿಯೂರಪ್ಪನವರು. ಬಿಜೆಪಿ ಆಪರೇಷನ್ ಕಮಲ ಮಾಡಿ 17 ಶಾಸಕರಿಗೆ ಹಣ ನೀಡಿ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತು”ಎಂದು ಹೇಳಿದ್ದಾರೆ.

ವೈರಲ್ ಕ್ಲಿಪ್‌ಗೆ ಸಂಬಂಧಿಸಿದ ಕಾರ್ಯಕ್ರಮದ ವರದಿಯನ್ನು ಹಿಂದುಸ್ತಾನ್ ಟೈಮ್ಸ್ ಮಾರ್ಚ್ 11ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. “ದೇವೇಗೌಡರು ತಮ್ಮ ಉಳಿವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ” ಎಂಬ ಶೀರ್ಷಿಕೆಯ ವರದಿಯಲ್ಲಿ, ಜನತಾ ದಳ (ಜಾತ್ಯತೀತ) ಪಕ್ಷದ ನಾಯಕ ಹೆಚ್‌ಡಿ ದೇವೇಗೌಡರು ತಮ್ಮ ಪಕ್ಷದ ಉಳಿವಿಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾನುವಾರ ಮಂಡ್ಯದ ಕಂಗೇರಿಯಲ್ಲಿ ನಡೆದ ಶಿಕ್ಷಕರ ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಮಾತನಾಡಿದರು” ಎಂದು ಬರೆಯಲಾಗಿದೆ.

ವರದಿಯ ಲಿಂಕ್ ಇಲ್ಲಿದೆ 

ಮಾರ್ಚ್‌ 11ರಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕಿದ್ದ ಸಿಎಂ ಸಿದ್ದರಾಯ್ಯ “ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಪ್ರಶ್ನಿಸಿದ್ದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆಯು ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬರೆದುಕೊಂಡಿದ್ದರು.

ಲಭ್ಯವಿರುವ ಎಲ್ಲಾ ಮೂಲಗಳನ್ನು ಪರಿಶೀಲಿಸಿ ನೋಡಿದಾಗ, ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿದ್ದರು ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ ಹೊರತು, ನಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿಲ್ಲ. ಸಿಎಂ ಭಾಷಣವನ್ನು ಎಡಿಟ್ ಮಾಡಿ ತಪ್ಪಾಗಿ ಹಂಚುತ್ತಿರುವುದು ಈ ಮೂಲಕ ಖಚಿತವಾಗಿದೆ.

ಇದನ್ನೂ ಓದಿ : Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...