Homeಫ್ಯಾಕ್ಟ್‌ಚೆಕ್Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

Fact Check: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

- Advertisement -
- Advertisement -

“ಇನ್ನೊಂದು ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೋ ಕ್ಲಿಪ್ ಒಂದು ಭಾರೀ ವೈರಲ್ ಆಗಿದೆ. ಅನೇಕ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

‘Murali Purshotham’ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದು, “ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ‘ರಿಷಿ ಬಾಗ್ರೀ’ (Rishi Bagree)ಕೂಡ ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಸಿದ್ದರಾಮಯ್ಯ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನ್ನು ಅನೇಕ ಎಕ್ಸ್ ಬಳಕೆದಾರರು ಮರು ಟ್ವೀಟ್ ಮಾಡಿದ್ದಾರೆ. ಆದರೆ, ರಿಷಿ ಬಾಗ್ರೀ ಪ್ರಸ್ತುತ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

 

‘BJP Intellectual Cell- Bengaluru (Modi Ka Parivar)’ ಎಂಬ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಸಿದ್ದರಾಮಯ್ಯ ಅವರದ್ದು. ಆದರೆ ಸಾಹೇಬರು ಇದೆ ಜನಮದಲ್ಲಿ ವಿಶೇಷ ಸಮುದಾಯದ ತುಷ್ಟೀಕರಣ ರಾಜಕಾರಣ ಆರಂಭಿಸಿದ್ದಾರೆ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕದ ಕೆಲ ಬಿಜೆಪಿ ನಾಯಕರು ಸೇರಿದಂತೆ, ಇನ್ನೂ ಹಲವರು ವೈರಲ್ ವಿಡಿಯೋ ಹಂಚಿಕೊಂಡಿದ್ದರು. ಆದರೆ, ಈಗ ಅದನ್ನು ಡಿಲಿಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್ : ಸಿಎಂ ಸಿದ್ದರಾಮಯ್ಯ ಕುರಿತ ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಸಿಎಂ ಭಾಷಣದ ಮೂಲ ವಿಡಿಯೋವನ್ನು ಹುಡುಕಿದೆ.

ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್‌ ಹಾಕಿ ಹುಡುಕಾಡಿದಾಗ ನಮಗೆ ಯೋಯೋ ಟಿವಿ (yoyo Tv) ಎಂಬ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ 29:45 ನಿಮಿಷದ ವಿಡಿಯೋವೊಂದು ಸಿಕ್ಕಿದೆ.

‘ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಭಾಷಣ’ ಎಂಬ ತಂಬ್‌ನೈಲ್ ಶೀರ್ಷಿಕೆಯಲ್ಲಿ ಇತ್ತೀಚೆಗೆ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ, 13 ನಿಮಿಷ 36 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೋವನ್ನು 13 ನಿಮಿಷ 26 ಸೆಕೆಂಡ್‌ನಿಂದ 13 ನಿಮಿಷ 44 ಸೆಕೆಂಡ್‌ಗಳ ನಡುವೆ ಸರಿಯಾಗಿ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಸಂಪೂರ್ಣ ಮಾತುಗಳು ಇವೆ. ” ಅದರಲ್ಲಿ, ಇದೇ ದೇವೆಗೌಡರು ನಾನು ಯಾವ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ. ಏನಾದರು ಇನ್ನೊಂದು ಜನ್ಮ ಇದೇ ಎನ್ನುದಾದರೆ, ಮುಂದಿನ ಜನ್ಮದಲ್ಲಿ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ದರು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಇಲ್ಲಿ, ಮುಂದಿನ ಜನ್ಮವಿದ್ದರೆ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದು ದೇವೆಗೌಡರು ಹೇಳಿದ್ದರು. ಅಂತಹ ದೇವೆಗೌಡರು ಈಗ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂಬುವುದಾಗಿದೆ ಸಿಎಂ ಸಿದ್ದರಾಮಯ್ಯ ಅವರ ಮಾತಿನ ಆರ್ಥ. ಆದರೆ, ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ‘ದೇವೆಗೌಡರು ಹೇಳಿದ್ದರು’ ಎಂಬುವುದನ್ನು ಕಟ್ ಮಾಡಿ ಹಂಚುವ ಮೂಲಕ, ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿದ್ದಾಗಿ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನೇ ನಿಜವೆಂದು ನಂಬಿದ ಅನೇಕ ಮಂದಿ ವಿಡಿಯೋ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ಲಭ್ಯವಿರುವ ವಿಡಿಯೋದ 12ನೇ ನಿಮಿಷದಲ್ಲಿ, “ಅವರು (ಜೆಡಿಎಸ್) ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ, ನಮ್ಮ ನಾಯಕರು ಅವರ (ಕುಮಾರಸ್ವಾಮಿ) ಮನೆಗೆ ಹೋಗಿಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು. ನಾವು ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಏಕೆಂದರೆ, ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರುವುದು ನಮಗೆ ಇಷ್ಟವಿರಲಿಲ್ಲ. ನಂತರ, ಅವರ ಪಕ್ಷವನ್ನು ಮುರಿದವರು ಯಾರು? ಯಡಿಯೂರಪ್ಪನವರು. ಬಿಜೆಪಿ ಆಪರೇಷನ್ ಕಮಲ ಮಾಡಿ 17 ಶಾಸಕರಿಗೆ ಹಣ ನೀಡಿ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತು”ಎಂದು ಹೇಳಿದ್ದಾರೆ.

ವೈರಲ್ ಕ್ಲಿಪ್‌ಗೆ ಸಂಬಂಧಿಸಿದ ಕಾರ್ಯಕ್ರಮದ ವರದಿಯನ್ನು ಹಿಂದುಸ್ತಾನ್ ಟೈಮ್ಸ್ ಮಾರ್ಚ್ 11ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. “ದೇವೇಗೌಡರು ತಮ್ಮ ಉಳಿವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ” ಎಂಬ ಶೀರ್ಷಿಕೆಯ ವರದಿಯಲ್ಲಿ, ಜನತಾ ದಳ (ಜಾತ್ಯತೀತ) ಪಕ್ಷದ ನಾಯಕ ಹೆಚ್‌ಡಿ ದೇವೇಗೌಡರು ತಮ್ಮ ಪಕ್ಷದ ಉಳಿವಿಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾನುವಾರ ಮಂಡ್ಯದ ಕಂಗೇರಿಯಲ್ಲಿ ನಡೆದ ಶಿಕ್ಷಕರ ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಮಾತನಾಡಿದರು” ಎಂದು ಬರೆಯಲಾಗಿದೆ.

ವರದಿಯ ಲಿಂಕ್ ಇಲ್ಲಿದೆ 

ಮಾರ್ಚ್‌ 11ರಂದು ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕಿದ್ದ ಸಿಎಂ ಸಿದ್ದರಾಯ್ಯ “ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಪ್ರಶ್ನಿಸಿದ್ದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆಯು ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬರೆದುಕೊಂಡಿದ್ದರು.

ಲಭ್ಯವಿರುವ ಎಲ್ಲಾ ಮೂಲಗಳನ್ನು ಪರಿಶೀಲಿಸಿ ನೋಡಿದಾಗ, ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿದ್ದರು ಎಂಬುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ ಹೊರತು, ನಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಜನಿಸಲು ಬಯಸುತ್ತೇನೆ ಎಂದು ಹೇಳಿಲ್ಲ. ಸಿಎಂ ಭಾಷಣವನ್ನು ಎಡಿಟ್ ಮಾಡಿ ತಪ್ಪಾಗಿ ಹಂಚುತ್ತಿರುವುದು ಈ ಮೂಲಕ ಖಚಿತವಾಗಿದೆ.

ಇದನ್ನೂ ಓದಿ : Fact Check: ನಮಾಝ್ ಮಾಡಲು ಬಂದ ವ್ಯಕ್ತಿ ಬುರ್ಖಾ ಧರಿಸಿದ್ದ ಎಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...