Homeಫ್ಯಾಕ್ಟ್‌ಚೆಕ್FACT CHECK : ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ರಾ?

FACT CHECK : ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮೀಸಲಾತಿಯನ್ನು (ಜಾತಿ ಆಧಾರಿತ) ಕೊನೆಗೊಳಿಸುವ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಹಿಂದಿ ಪತ್ರಿಕೆಯೊಂದರ ಫೋಟೋವನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ.

ಸೆಪ್ಟೆಂಬರ್ 20ರಂದು S4 (@samyak_samaj)ಎಂಬ ಎಕ್ಸ್ ಖಾತೆಯಲ್ಲಿ ಫೋಟೋ ಹಂಚಿಕೊಂಡು ” ದೇಶದಲ್ಲಿ ಅಶಾಂತಿಗೆ ಕಾಂಗ್ರೆಸ್‌ ಪಕ್ಷವೇ ಮೂಲ ಕಾರಣ. ಕಾಂಗ್ರೆಸ್ ಉಳಿದರೆ ಮೀಸಲಾತಿ ಮೇಲಿನ ದಾಳಿ ಮುಂದುವರಿಯಲಿದೆ. ಕಾಂಗ್ರೆಸ್ ನಾಶವಾದರೆ ಮೀಸಲಾತಿ ಉಳಿಯಲಿದೆ” ಎಂದು ಬರೆದುಕೊಳ್ಳಲಾಗಿತ್ತು.

ಸೆ.20ರಂದು ಅಮರ್ ವರ್ಮಾ (@AmarVarma_)ಎಂಬ ಎಕ್ಸ್ ಖಾತೆಯಲ್ಲೂ ಅದೇ ಫೋಟೋ ಹಂಚಿಕೊಂಡು ” ಡಾ.ಬಿಆರ್ ಅಂಬೇಡ್ಕರ್ ಅವರು ಹೇಳಿದ್ದು ಸರಿ ಇದೆ. ಕಾಂಗ್ರೆಸ್ ದಲಿತ ವಿರೋಧಿಯಾಗಿದೆ. ಅದು ಭಾರತದಲ್ಲಿ ಮೀಸಲಾತಿಯನ್ನು ಕೊನೆಗೊಳಿಸಲು ಬಯಸುತ್ತದೆ. ಕಾಂಗ್ರೆಸ್‌ನ ಪ್ರಮುಖ ನಾಯಕನೇ ಈ ಬಗ್ಗೆ ಹೇಳಿದ್ದಾರೆ” ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಹಲವರು ಹಂಚಿಕೊಂಡಿರುವ ದಿನಪತ್ರಿಕೆ ಫೋಟೋದಲ್ಲಿ, ಆ ಪತ್ರಿಕೆಯ ಹೆಸರು ‘ಆಪ್ಕಿ ಆವಾಝ್’ ಎಂದಿರುವುದು ಗಮನಿಸಿದ ನಾವು, ಆ ಪತ್ರಿಕೆ ಬಗ್ಗೆ ಇಂಟರ್‌ನೆಟ್‌ನಲ್ಲಿ ಹುಡುಕಾಡಿದ್ದೇವೆ. ಆ ಹೆಸರಿನ ಯಾವುದೇ ವಿಶ್ವಾಸಾರ್ಹ ಪತ್ರಿಕೆ ನಮಗೆ ಕಂಡು ಬಂದಿಲ್ಲ.

ಇನ್ನು ಕೆ.ಸಿ ವೇಣುಗೋಪಾಲ್ ಅವರು ಮೀಸಲಾತಿ ಕೊನೆಗೊಳಿಸುವ ಹೇಳಿಕೆ ನೀಡಿದ್ದು ನಿಜವೇ? ಎಂದು ಮಾಧ್ಯಮ ವರದಿಗಳನ್ನೂ ನಾವು ಹುಡುಕಿದ್ದೇವೆ. ಈ ವೇಳೆ ಯಾವುದೇ ಮುಖ್ಯವಾಹಿನಿ, ವಿಶ್ವಾಸಾರ್ಹ ಮಾಧ್ಯಮಗಳು ಆ ಕುರಿತು ವರದಿ ಮಾಡಿರುವುದು ಲಭ್ಯವಾಗಿಲ್ಲ. ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್‌ನ ಪ್ರಮುಖ ನಾಯಕ ಹಾಗೂ ದೇಶದ ಪ್ರಸಿದ್ದ ರಾಜಕಾರಣಿಗಳಲ್ಲಿ ಒಬ್ಬರಾಗಿರುವುದರಿಂದ ಅವರು ಮೀಸಲಾತಿ ವಿರುದ್ದ ಹೇಳಿಕೆ ಕೊಟ್ಟಿದ್ದರೆ ಅದು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿತ್ತು.

ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ವೇಳೆ, ಅಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ “ದೇಶದಲ್ಲಿ ಸಮಾನತೆ ಸಾರ್ವತ್ರಿಕವಾದಾಗ ನಾವು ಮೀಸಲಾತಿ ಕೊನೆಗೊಳಿಸುವ ಬಗ್ಗೆ ಯೋಚಿಸುತ್ತೇವೆ” ಎಂದಿದ್ದರು. ಆ ಹೇಳಿಕೆಯನ್ನು ತಪ್ಪಾಗಿ ಪ್ರಚಾರಪಡಿಸಿದ ಬಿಜೆಪಿಗರು, ರಾಹುಲ್ ಗಾಂಧಿ ಮೀಸಲಾತಿ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದಿದ್ದರು. ಆಗ ಕೆ.ಸಿ ವೇಣುಗೋಪಾಲ್ ರಾಹುಲ್ ಗಾಂಧಿ ಪರ ಹೇಳಿಕೆ ಕೊಟ್ಟಿದ್ದರು. ಬಿಜೆಪಿಗರ ವಿರುದ್ದ ಕಿಡಿಕಾರಿದ್ದರು. ಈ ಕುರಿತು ಎಬಿಪಿ ಲೈವ್ ಪ್ರಕಟಿಸಿದ್ದ ವರದಿ ಇಲ್ಲಿದೆ.

ಲಭ್ಯ ಮಾಹಿತಿಗಳನ್ನು ಆಧರಿಸಿ ನಾವು ನಡೆಸಿ ಪರಿಶೀಲನೆಯಲ್ಲಿ ಕೆ.ಸಿ ವೇಣುಗೋಪಾಲ್ ಮೀಸಲಾತಿ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ಪತ್ರಿಕೆಯ ಫೋಟೋ ನಕಲಿ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...