Homeಫ್ಯಾಕ್ಟ್‌ಚೆಕ್FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

- Advertisement -
- Advertisement -

ಮುಂದಿನ ನವೆಂಬರ್ 5 ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ ಮಹತ್ವದ ಚುನಾವಣೆ ನಡೆಯಲಿದೆ. ಆಡಳಿತರೂಢ ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಅಭ್ಯರ್ಥಿಯಾಗಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗಳಿದಿದ್ದಾರೆ. ಎರಡೂ ಕಡೆಯವರ ಚುನಾವಣಾ ಪ್ರಚಾರ, ವಾಗ್ವಾದಗಳು ಜೋರಾಗಿಯೇ ನಡೆಯುತ್ತಿದೆ.

ಈ ನಡುವೆ ಕಮಲಾ ಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.

ಸೆಪ್ಟೆಂಬರ್ 9,2024ರಂದು “DK Shivakumar : ಸಿಎಂ ಕುರ್ಚಿ ಫೈಟ್​ ಮಧ್ಯೆ ‘ಬಂಡೆ’ ಫಾರಿನ್​ ಟೂರ್ ​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌‌‌, ಕುತೂಹಲ ಮೂಡಿಸಿದ US ಟೂರ್” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌18 ಕನ್ನಡ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ “ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌‌ ಅಮೆರಿಕಾಗೆ ತೆರಳಿದ್ದಾರೆ” ಎಂದು ಉಲ್ಲೇಖಿಸಿತ್ತು.

ಸೆಪ್ಟೆಂಬರ್ 8, 2024ರಂದು ರಿಪಬ್ಲಿಕ್ ಟಿವಿ ಇಂಗ್ಲಿಷ್‌ನ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ(@MrSinha_)”ಕಮಲಾ ಹ್ಯಾರಿಸ್ ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಯುಎಸ್‌ಎಗೆ ಮತ್ತು ರಿಂಗ್-ಲೀಡರ್ ಒಬಾಮಾ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದಾರೆ. ಪಪ್ಪು ಈಗಾಗಲೇ ಅಮೆರಿಕಾದಲ್ಲಿದ್ದಾರೆ. ಬಾಂಗ್ಲಾದೇಶದ ನಿಯೋಜಿತ ಪ್ರಧಾನಿ ಎಂ.ಡಿ ಯೂನಸ್ ಕೂಡ ಒಬಾಮಾ ಶಾಲೆಯ ಉತ್ಪನ್ನ. ಇವರೆಲ್ಲ ಮೋದಿ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳನ್ನು ವೇಗಗೊಳಿಸಿರುವಂತೆ ಕಾಣುತ್ತದೆ. ಭಾರತದಲ್ಲಿ ಕುಳಿತಿರುವ ಅವರ ಏಜೆಂಟ್‌ಗಳು ಕಳೆದ ಕೆಲವು ವಾರಗಳಲ್ಲಿ ಈಗಾಗಲೇ ಹಲವು ಮೋದಿ/ಭಾರತ ವಿರೋಧಿಗಳನ್ನು ಭೇಟಿಯಾಗಿದ್ದಾರೆ” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 8,202ರಂದು ಪಬ್ಲಿಕ್ ಟಿವಿ ಕನ್ನಡ, ವಿಜಯ ಕರ್ನಾಟಕ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ಕಮಲಾ ಹ್ಯಾರಿಸ್‌ ಅವರು ಡಿ.ಕೆ ಶಿವಕುಮಾರ್‌ಗೆ ಅಮೆರಿಕಕ್ಕೆ ಆಹ್ವಾನ ನೀಡಿದ್ದಾರೆ ಎಂದು ಸುದ್ದಿ ಪ್ರಕಟಿಸಿತ್ತು.

ಹಾಗಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕಮಲಾ ಹ್ಯಾರಿಸ್ ಅಮೆರಿಕಕ್ಕೆ ಕರೆಸಿಕೊಂಡಿರುವುದು ನಿಜಾನಾ? ರಾಹುಲ್‌ ಗಾಂಧಿ-ಡಿಕೆಶಿ ಒಟ್ಟಿಗೆ ಅಮೆರಿಕಕ್ಕೆ ಹೋದ್ರಾ? ಎಂದು ನೋಡೊಣ.

ಫ್ಯಾಕ್ಟ್‌ಚೆಕ್ : ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವ ಸುದ್ದಿಗೆ ಸಂಬಂಧಪಟ್ಟಂತೆ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಸೆಪ್ಟೆಂಬರ್ 8, 2024ರಂದು ಎಕ್ಸ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

“ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಕರ್ನಾಟಕ ಕಾಂಗ್ರೆಸ್‌ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಅದರಲ್ಲಿ “ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ವೈಯಕ್ತಿಕ ಕೆಲಸಗಳ ನಿಮಿತ್ತ ಅಮೆರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು, ಯಾವುದೇ ರಾಜಕೀಯ ಕಾರಣಗಳಿಗಲ್ಲ. ಕೆಲ ಮಾಧ್ಯಮಗಳಲ್ಲಿ ಉಹಾಪೋಹದ ವರದಿಗಳು ಪ್ರಸಾರವಾಗುತ್ತಿದ್ದು, ಆ ವರದಿಗಳು ಸತ್ಯಕ್ಕೆ ದೂರವಾಗಿದೆ” ಎಂದು ಸ್ಪಷ್ಟಪಡಿಸಿತ್ತು.

ಸ್ವತಃ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಡಿಕೆಶಿ ಅವರನ್ನು ಕಮಲಾ ಹ್ಯಾರಿಸ್ ಅವರು ಕರೆಸಿಕೊಂಡಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಆದ್ದರಿಂದ ಅವು ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಬಿರುಕು ಬಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...