Homeಫ್ಯಾಕ್ಟ್‌ಚೆಕ್FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

- Advertisement -
- Advertisement -

ಮುಂದಿನ ನವೆಂಬರ್ 5 ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ ಮಹತ್ವದ ಚುನಾವಣೆ ನಡೆಯಲಿದೆ. ಆಡಳಿತರೂಢ ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಅಭ್ಯರ್ಥಿಯಾಗಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗಳಿದಿದ್ದಾರೆ. ಎರಡೂ ಕಡೆಯವರ ಚುನಾವಣಾ ಪ್ರಚಾರ, ವಾಗ್ವಾದಗಳು ಜೋರಾಗಿಯೇ ನಡೆಯುತ್ತಿದೆ.

ಈ ನಡುವೆ ಕಮಲಾ ಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.

ಸೆಪ್ಟೆಂಬರ್ 9,2024ರಂದು “DK Shivakumar : ಸಿಎಂ ಕುರ್ಚಿ ಫೈಟ್​ ಮಧ್ಯೆ ‘ಬಂಡೆ’ ಫಾರಿನ್​ ಟೂರ್ ​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌‌‌, ಕುತೂಹಲ ಮೂಡಿಸಿದ US ಟೂರ್” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌18 ಕನ್ನಡ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ “ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌‌ ಅಮೆರಿಕಾಗೆ ತೆರಳಿದ್ದಾರೆ” ಎಂದು ಉಲ್ಲೇಖಿಸಿತ್ತು.

ಸೆಪ್ಟೆಂಬರ್ 8, 2024ರಂದು ರಿಪಬ್ಲಿಕ್ ಟಿವಿ ಇಂಗ್ಲಿಷ್‌ನ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ(@MrSinha_)”ಕಮಲಾ ಹ್ಯಾರಿಸ್ ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಯುಎಸ್‌ಎಗೆ ಮತ್ತು ರಿಂಗ್-ಲೀಡರ್ ಒಬಾಮಾ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದಾರೆ. ಪಪ್ಪು ಈಗಾಗಲೇ ಅಮೆರಿಕಾದಲ್ಲಿದ್ದಾರೆ. ಬಾಂಗ್ಲಾದೇಶದ ನಿಯೋಜಿತ ಪ್ರಧಾನಿ ಎಂ.ಡಿ ಯೂನಸ್ ಕೂಡ ಒಬಾಮಾ ಶಾಲೆಯ ಉತ್ಪನ್ನ. ಇವರೆಲ್ಲ ಮೋದಿ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳನ್ನು ವೇಗಗೊಳಿಸಿರುವಂತೆ ಕಾಣುತ್ತದೆ. ಭಾರತದಲ್ಲಿ ಕುಳಿತಿರುವ ಅವರ ಏಜೆಂಟ್‌ಗಳು ಕಳೆದ ಕೆಲವು ವಾರಗಳಲ್ಲಿ ಈಗಾಗಲೇ ಹಲವು ಮೋದಿ/ಭಾರತ ವಿರೋಧಿಗಳನ್ನು ಭೇಟಿಯಾಗಿದ್ದಾರೆ” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 8,202ರಂದು ಪಬ್ಲಿಕ್ ಟಿವಿ ಕನ್ನಡ, ವಿಜಯ ಕರ್ನಾಟಕ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ಕಮಲಾ ಹ್ಯಾರಿಸ್‌ ಅವರು ಡಿ.ಕೆ ಶಿವಕುಮಾರ್‌ಗೆ ಅಮೆರಿಕಕ್ಕೆ ಆಹ್ವಾನ ನೀಡಿದ್ದಾರೆ ಎಂದು ಸುದ್ದಿ ಪ್ರಕಟಿಸಿತ್ತು.

ಹಾಗಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕಮಲಾ ಹ್ಯಾರಿಸ್ ಅಮೆರಿಕಕ್ಕೆ ಕರೆಸಿಕೊಂಡಿರುವುದು ನಿಜಾನಾ? ರಾಹುಲ್‌ ಗಾಂಧಿ-ಡಿಕೆಶಿ ಒಟ್ಟಿಗೆ ಅಮೆರಿಕಕ್ಕೆ ಹೋದ್ರಾ? ಎಂದು ನೋಡೊಣ.

ಫ್ಯಾಕ್ಟ್‌ಚೆಕ್ : ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವ ಸುದ್ದಿಗೆ ಸಂಬಂಧಪಟ್ಟಂತೆ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಸೆಪ್ಟೆಂಬರ್ 8, 2024ರಂದು ಎಕ್ಸ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

“ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಕರ್ನಾಟಕ ಕಾಂಗ್ರೆಸ್‌ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಅದರಲ್ಲಿ “ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ವೈಯಕ್ತಿಕ ಕೆಲಸಗಳ ನಿಮಿತ್ತ ಅಮೆರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು, ಯಾವುದೇ ರಾಜಕೀಯ ಕಾರಣಗಳಿಗಲ್ಲ. ಕೆಲ ಮಾಧ್ಯಮಗಳಲ್ಲಿ ಉಹಾಪೋಹದ ವರದಿಗಳು ಪ್ರಸಾರವಾಗುತ್ತಿದ್ದು, ಆ ವರದಿಗಳು ಸತ್ಯಕ್ಕೆ ದೂರವಾಗಿದೆ” ಎಂದು ಸ್ಪಷ್ಟಪಡಿಸಿತ್ತು.

ಸ್ವತಃ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಡಿಕೆಶಿ ಅವರನ್ನು ಕಮಲಾ ಹ್ಯಾರಿಸ್ ಅವರು ಕರೆಸಿಕೊಂಡಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಆದ್ದರಿಂದ ಅವು ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಬಿರುಕು ಬಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...