Homeಫ್ಯಾಕ್ಟ್‌ಚೆಕ್FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

FACT CHECK : ಕಮಲಾ ಹ್ಯಾರಿಸ್ ಭೇಟಿಯಾಗಲು ಡಿಕೆಶಿ ಅಮೆರಿಕಗೆ ಹೋದ್ರಾ?

- Advertisement -
- Advertisement -

ಮುಂದಿನ ನವೆಂಬರ್ 5 ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ ಮಹತ್ವದ ಚುನಾವಣೆ ನಡೆಯಲಿದೆ. ಆಡಳಿತರೂಢ ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಅಭ್ಯರ್ಥಿಯಾಗಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗಳಿದಿದ್ದಾರೆ. ಎರಡೂ ಕಡೆಯವರ ಚುನಾವಣಾ ಪ್ರಚಾರ, ವಾಗ್ವಾದಗಳು ಜೋರಾಗಿಯೇ ನಡೆಯುತ್ತಿದೆ.

ಈ ನಡುವೆ ಕಮಲಾ ಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ.

ಸೆಪ್ಟೆಂಬರ್ 9,2024ರಂದು “DK Shivakumar : ಸಿಎಂ ಕುರ್ಚಿ ಫೈಟ್​ ಮಧ್ಯೆ ‘ಬಂಡೆ’ ಫಾರಿನ್​ ಟೂರ್ ​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌‌‌, ಕುತೂಹಲ ಮೂಡಿಸಿದ US ಟೂರ್” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌18 ಕನ್ನಡ ಸುದ್ದಿ ಪ್ರಕಟಿಸಿತ್ತು. ಅದರಲ್ಲಿ “ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌‌ ಅಮೆರಿಕಾಗೆ ತೆರಳಿದ್ದಾರೆ” ಎಂದು ಉಲ್ಲೇಖಿಸಿತ್ತು.

ಸೆಪ್ಟೆಂಬರ್ 8, 2024ರಂದು ರಿಪಬ್ಲಿಕ್ ಟಿವಿ ಇಂಗ್ಲಿಷ್‌ನ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ(@MrSinha_)”ಕಮಲಾ ಹ್ಯಾರಿಸ್ ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಯುಎಸ್‌ಎಗೆ ಮತ್ತು ರಿಂಗ್-ಲೀಡರ್ ಒಬಾಮಾ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದಾರೆ. ಪಪ್ಪು ಈಗಾಗಲೇ ಅಮೆರಿಕಾದಲ್ಲಿದ್ದಾರೆ. ಬಾಂಗ್ಲಾದೇಶದ ನಿಯೋಜಿತ ಪ್ರಧಾನಿ ಎಂ.ಡಿ ಯೂನಸ್ ಕೂಡ ಒಬಾಮಾ ಶಾಲೆಯ ಉತ್ಪನ್ನ. ಇವರೆಲ್ಲ ಮೋದಿ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳನ್ನು ವೇಗಗೊಳಿಸಿರುವಂತೆ ಕಾಣುತ್ತದೆ. ಭಾರತದಲ್ಲಿ ಕುಳಿತಿರುವ ಅವರ ಏಜೆಂಟ್‌ಗಳು ಕಳೆದ ಕೆಲವು ವಾರಗಳಲ್ಲಿ ಈಗಾಗಲೇ ಹಲವು ಮೋದಿ/ಭಾರತ ವಿರೋಧಿಗಳನ್ನು ಭೇಟಿಯಾಗಿದ್ದಾರೆ” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 8,202ರಂದು ಪಬ್ಲಿಕ್ ಟಿವಿ ಕನ್ನಡ, ವಿಜಯ ಕರ್ನಾಟಕ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ಕಮಲಾ ಹ್ಯಾರಿಸ್‌ ಅವರು ಡಿ.ಕೆ ಶಿವಕುಮಾರ್‌ಗೆ ಅಮೆರಿಕಕ್ಕೆ ಆಹ್ವಾನ ನೀಡಿದ್ದಾರೆ ಎಂದು ಸುದ್ದಿ ಪ್ರಕಟಿಸಿತ್ತು.

ಹಾಗಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕಮಲಾ ಹ್ಯಾರಿಸ್ ಅಮೆರಿಕಕ್ಕೆ ಕರೆಸಿಕೊಂಡಿರುವುದು ನಿಜಾನಾ? ರಾಹುಲ್‌ ಗಾಂಧಿ-ಡಿಕೆಶಿ ಒಟ್ಟಿಗೆ ಅಮೆರಿಕಕ್ಕೆ ಹೋದ್ರಾ? ಎಂದು ನೋಡೊಣ.

ಫ್ಯಾಕ್ಟ್‌ಚೆಕ್ : ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವ ಸುದ್ದಿಗೆ ಸಂಬಂಧಪಟ್ಟಂತೆ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಸೆಪ್ಟೆಂಬರ್ 8, 2024ರಂದು ಎಕ್ಸ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

“ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಕರ್ನಾಟಕ ಕಾಂಗ್ರೆಸ್‌ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಅದರಲ್ಲಿ “ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ವೈಯಕ್ತಿಕ ಕೆಲಸಗಳ ನಿಮಿತ್ತ ಅಮೆರಿಕಾದ ವಾಷಿಂಗ್ಟನ್ ನಗರಕ್ಕೆ ಪ್ರವಾಸ ಕೈಗೊಂಡಿದ್ದಾರೆಯೇ ಹೊರತು, ಯಾವುದೇ ರಾಜಕೀಯ ಕಾರಣಗಳಿಗಲ್ಲ. ಕೆಲ ಮಾಧ್ಯಮಗಳಲ್ಲಿ ಉಹಾಪೋಹದ ವರದಿಗಳು ಪ್ರಸಾರವಾಗುತ್ತಿದ್ದು, ಆ ವರದಿಗಳು ಸತ್ಯಕ್ಕೆ ದೂರವಾಗಿದೆ” ಎಂದು ಸ್ಪಷ್ಟಪಡಿಸಿತ್ತು.

ಸ್ವತಃ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಡಿಕೆಶಿ ಅವರನ್ನು ಕಮಲಾ ಹ್ಯಾರಿಸ್ ಅವರು ಕರೆಸಿಕೊಂಡಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಆದ್ದರಿಂದ ಅವು ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಸರ್ದಾರ್ ಪಟೇಲರ ‘ಏಕತಾ ಪ್ರತಿಮೆ’ ಬಿರುಕು ಬಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...