Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...