Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...