Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...